ಮೈಸೂರಿನಿಂದ ಬೆಂಗಳೂರಿಗೆ ಜೀವಂತ ಹೃದಯ ರವಾನೆ

– 170 ಕಿಮೀ ರಸ್ತೆ ಮಾರ್ಗದಲ್ಲಿ 3 ಗಂಟೆ ಪ್ರಯಾಣ

ಬೆಂಗಳೂರು: ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ರಾಮಯ್ಯ ನಾರಾಯಣ ಹೃದಯ ಕೇಂದ್ರಕ್ಕೆ ಜೀವಂತ ಹೃದಯ ಯಶಸ್ವಿಯಾಗಿ ರವಾನೆ ಆಗಿದೆ.

ಹೃದಯ ಸಾಗಿಸಲು ಗ್ರೀನ್ ಕಾರಿಡರ್ ವ್ಯವಸ್ಥೆ ನಿರ್ಮಿಸಲಾಗಿತ್ತು. ಇದರಿಂದ ಸುಮಾರು 170 ಕಿ. ಮೀ ರಸ್ತೆ ಮಾರ್ಗವನ್ನು 3 ಗಂಟೆಯಲ್ಲಿ ಆಸ್ಪತ್ರೆ ಸೇರಲು ಸಾಧ್ಯವಾಯಿತು.

ಮುಂಜಾನೆ 7.30ಕ್ಕೆ ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಯಿಂದ ಹೊರಟ ಅಂಬುಲೆನ್ಸ್ ಮಂಡ್ಯ, ಬಿಡದಿ, ಕೆಂಗೇರಿ ಮಾರ್ಗದ ಮೂಲಕ ಬೆಳ್ಳಗ್ಗೆ 10.30ಕ್ಕೆ ಸರಿಯಾಗಿ ರಾಮಯ್ಯ ನಾರಾಯಣ ಹೃದಯ ಕೇಂದ್ರ ತಲುಪಿತು ಎಂದು ರಾಮಯ್ಯ ನಾರಾಯಣ ಹೃದಯ ಕೇಂದ್ರದ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಚಾಮರಾಜನಗರ ಮೂಲದ ಶಿವಕುಮಾರ್ ಎಂಬವರಿಗೆ ಹೃದಯಾಘಾತ ಆಗಿತ್ತು. ಹೃದಯ ಕಸಿ ಮಾಡಲು ರಾಮಯ್ಯ ನಾರಾಯಣ ಹೃದಯ ಕೇಂದ್ರದ ವೈದ್ಯರು ನಿರ್ಧರಿಸಿದ್ದರು. ಹೀಗಾಗಿ ಶಿವಕುಮಾರ್ ಕುಟುಂಬಸ್ಥರ ಒಪ್ಪಿಗೆ ಮೆರೆಗೆ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ರಾಮಯ್ಯ ನಾರಾಯಣ ಹೃದಯ ಕೇಂದ್ರದ ವೈದ್ಯರಾದ ಡಾ. ನಾಗಮಲ್ಲೇಶ್, ರವಿಶಂಕರ್ ಶೆಟ್ಡಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಲಿದ್ದಾರೆ.

Comments

Leave a Reply

Your email address will not be published. Required fields are marked *