ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ

MONEY

ಚಿಕ್ಕೋಡಿ: ಸಾಲಬಾಧೆ ತಾಳದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ.

ಸತ್ತಿ ಗ್ರಾಮದ ಬಾಬು ಯಮನಪ್ಪ ಮಾದರ(43) ಆತ್ಮಹತ್ಯೆ ಮಾಡಿಕೊಂಡ ರೈತ. ರಡ್ಡೇರಹಟ್ಟಿ ಗ್ರಾಮದ ದಳವಾಯಿ ತೋಟದ ವಸತಿ ಪ್ರದೇಶದಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣು ಬಿಗಿದುಕೂಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2 ಎಕರೆ 20 ಗುಂಟೆ ಜಮೀನು ಹೊಂದಿದ್ದ ಯಮನಪ್ಪ ಸತ್ತಿಯ ಕೆನರಾ ಬ್ಯಾಂಕ್ ನಲ್ಲಿ 3 ಲಕ್ಷ ಮತ್ತು ಇತರ 2 ಲಕ್ಷ ಸೇರಿ ಒಟ್ಟು 5 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ:  ಸಿಲಿಂಡರ್ ಸ್ಫೋಟ- ಮೊಮ್ಮಗಳ ಸಮಯ ಪ್ರಜ್ಞೆಯಿಂದ ಉಳೀತು ಅಜ್ಜಿ ಜೀವ

ಬೆಳೆ ಸರಿಯಾಗಿ ಬಾರದ ಹಿನ್ನೆಲೆಯಲ್ಲಿ ಸಾಲವನ್ನು ತುಂಬಲಾಗದೆ ಮನನೊಂದ ರೈತ, ಭರಮಪ್ಪ ದಳವಾಯಿ ಎಂಬವರ ಗದ್ದೆಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಹೀರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ – ಆತಂಕದಲ್ಲಿ ನದಿ ತೀರದ ಜನ

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *