ಮೇ 11ರಿಂದ ಅಡಕೆ ವಹಿವಾಟು ಆರಂಭ: ಶಾಸಕ ಆರಗ ಜ್ಞಾನೇಂದ್ರ

– ಅಡಕೆ ಧಾರಣೆ ಕುಸಿಯಲು ಬಿಡಲ್ಲ

ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದ ಸ್ಥಗಿತಗೊಂಡಿದ್ದ ಅಡಕೆ ವಹಿವಾಟು ಮೇ 11ರಿಂದ ಆರಂಭವಾಗಲಿದೆ ಎಂದು ಅಡಕೆ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಗರದ ಮ್ಯಾಮ್ ಕೋಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ಬೆಳೆಗಾರರ ಹಿತ ಮನಗಂಡು ಅಡಕೆ ಖರೀದಿ ಆರಂಭಿಸಲಾಗುವುದು, ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಕೊರೊನಾ ವೈರಸ್ ನಿಂದಾಗಿ ಉತ್ತರ ಭಾರತದಲ್ಲಿನ ಪಾನ್ ಮಸಲಾ ಕಾರ್ಖಾನೆಗಳು ಸ್ಥಗಿತಗೊಂಡಿವೆ. ಹೀಗಾಗಿ ಅಡಕೆ ರಫ್ತು ಸಾಧ್ಯವಾಗಿರಲಿಲ್ಲ ಜೊತೆಗೆ ಕಾರ್ಮಿಕರು ಲಭ್ಯವಿಲ್ಲದ ಕಾರಣ ವಹಿವಾಟು ಸ್ಥಗಿತಗೊಂಡಿತ್ತು ಎಂದು ಸ್ಪಷ್ಟಪಡಿಸಿದರು.

ಅಡಕೆ ವಹಿವಾಟು ಸ್ಥಗಿತಗೊಂಡಿದ್ದರಿಂದ ಬೆಳೆಗಾರರು ಧಾರಣೆ ಕುಸಿಯಬಹುದು ಎಂಬ ಭೀತಿಯಲ್ಲಿದ್ದಾರೆ. ಯಾವುದೇ ಕಾರಣಕ್ಕೂ ಅಡಕೆ ಧಾರಣೆ ಕುಸಿಯಲು ಬಿಡುವುದಿಲ್ಲ. ಯಾರೂ ಭಯಪಡುವ ಅಗತ್ಯವಿಲ್ಲ. ಧಾರಣೆ ಕುಸಿಯಲಿದೆ ಎಂಬ ಭೀತಿಗೆ ಒಳಗಾಗಿ ಬೆಳೆಗಾರರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡಬಾರದು ಎಂದು ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *