ಅಧಿವೇಶದಲ್ಲಿ ಬಿಜೆಪಿ ಸಂಸದರನ್ನು ಕುಟುಕಿದ ದೇವೇಗೌಡ

– ಮೈತ್ರಿ ಸರ್ಕಾರದ ಬಗ್ಗೆ ಟೀಕೆ ಮಾಡಬೇಡಿ

ನವದೆಹಲಿ: ಲೋಕಸಭೆಯಲ್ಲಿ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ಬಗ್ಗೆ ಟೀಕೆ ಮಾಡಿದ ಬಿಜೆಪಿ ನಾಯಕರ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ವೇಳೆ ಮಾತನಾಡಿದ ಮಾಜಿ ಪ್ರಧಾನಿ, ಕರ್ನಾಟಕದಲ್ಲಿ ರೈತರ ಸಾಲಮನ್ನಾ ಮಾಡುವ ಪ್ರತಿ ಹಂತದ ಹಣದ ಮಾಹಿತಿ ನನ್ನ ಬಳಿ ಇದೆ. ಇದರ ಹಿಂದೆ ನಾನು ಇದ್ದೇನೆ ಎನ್ನುವುದೇ ಯಾರಿಗೂ ತಿಳಿಯುತ್ತಿಲ್ಲ. ಕಡಿಮೆ ಸ್ಥಾನ ಹೊಂದಿರುವ ನಮ್ಮ ಜೊತೆಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿಕೊಂಡಿದೆ. ಸಮ್ಮಿಶ್ರ ಸರ್ಕಾರ ಬಿದ್ದು ಹೋಗುತ್ತದೆ ಅಂತ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಕೇವಲ 13 ದಿನಕ್ಕೆ ಬಿದ್ದು ಹೋಗಿತ್ತು. ಅಂತಹ ಮೇರು ಪ್ರತಿಭೆಯೇ ಬಹುಮತ ಸಾಬೀತು ಪಡಿಸಲು ವಿಫಲರಾದರು ಎಂದು ಹೇಳಿ ಬಿಜೆಪಿಯನ್ನು ಕುಟುಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *