‘ಜನ ಕೊಡಿ ಕೆಲಸ ಮಾಡ್ತೀವಿ!’- ಸರ್ಕಾರಕ್ಕೆ ಪತ್ರ ಬರೆದ ಲೋಕಾಯುಕ್ತರು

ಬೆಂಗಳೂರು: ಮೊದಲೇ ಹಲ್ಲಿಲ್ಲದ ಹಾವಿನಂತಿರುವ ಲೋಕಾಯುಕ್ತ ಈಗ ಸಿಬ್ಬಂದಿಯೂ ಇಲ್ಲದೆ ಸೊರಗಿ ಹೋಗಿದೆ. ಮಾಡಕೋ ಸಾಕಷ್ಟು ಕೆಲಸ ಇದೆ. ಆದರೆ ಸಂಸ್ಥೆಯಲ್ಲಿ ಸಿಬ್ಬಂದಿ ಮಾತ್ರ ಇಲ್ಲ. ಹೀಗಿರೋವಾಗ ಕೆಲಸ ಮಾಡೋಕೆ ಹೇಗೆ ಸಾಧ್ಯ ಮೊದಲು ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿಕೊಡಿ ಎಂದು ಲೋಕಾಯುಕ್ತ ನ್ಯಾ. ವಿಶ್ವನಾಥಶೆಟ್ಟಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈಗಿರುವ ಸಿಬ್ಬಂದಿಗಳು ಎಲ್ಲಾ ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಈಗಾಗಲೇ ಕೆಲ ರಾಜಕಾರಣಿಗಳು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ನೀಡಿದ್ದಾರೆ. ಇದನ್ನ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಲು ಸಿಬ್ಬಂದಿಗಳ ಕೊರತೆ ಇದೆ. ಹಾಗೆ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ವಿಭಾಗದ ಸಿಬ್ಬಂದಿಗಳು ಇಲ್ಲ. ಬಹುಮುಖ್ಯವಾಗಿ ಅಡಿಷನಲ್ ರಿಜಿಸ್ಟ್ರಾರ್ ಹುದ್ದೆಯೂ ಖಾಲಿ ಇದೆ. ಇದಕ್ಕೆ ತಕ್ಕಂತೆ ಹೈಕೋರ್ಟ್ ನಿವೃತ್ತ ನ್ಯಾಯಾಮೂರ್ತಿಗಳನ್ನು ನೇಮಕ ಮಾಡಬೇಕಾಗುತ್ತೆ. ಇದುವರೆಗೂ ಸರ್ಕಾರ ಯಾರನ್ನೂ ನೇಮಕ ಮಾಡಿಲ್ಲ.

ಕೂಡಲೇ ಸಿಬ್ಬಂದಿಗಳ ನೇಮಕ ಮಾಡಿದ್ದಲ್ಲಿ ಹಳೆ ಪ್ರಕರಣಕ್ಕೂ ಮುಕ್ತಿ ಹಾಡಬಹುದು. ಈ ಹಿಂದೆಯೂ ಸಿಬ್ಬಂದಿ ನೇಮಕಕ್ಕೆ ಮನವಿ ಮಾಡಿದ್ದರೂ ಸರ್ಕಾರ ಸ್ಪಂಧಿಸಿಲ್ಲ. ಈ ಬಾರಿ ಅಗತ್ಯವಾಗಿ ಸಿಬ್ಬಂದಿಗಳ ನೇಮಕ ಮಾಡಿ ಎಂದು ಪತ್ರದ ಮೂಲಕ ವಿಶ್ವನಾಥ್ ಶೆಟ್ಟಿ ಮನವಿ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *