ರಾಂಚಿಯಲ್ಲಿ ಹನುಮಾನ್ ವಿಗ್ರಹ ಧ್ವಂಸ- ಪರಿಸ್ಥಿತಿ ಉದ್ವಿಗ್ನ

ರಾಂಚಿ: ಜಾರ್ಖಂಡ್‌ನ (Jharkhand) ರಾಂಚಿಯಲ್ಲಿರುವ ದೇವಾಲಯದಲ್ಲಿ ಕೆಲ ಸಮಾಜ ವಿರೋಧಿ ಶಕ್ತಿಗಳು ಹನುಮಾನ್ ವಿಗ್ರಹ (Lord Hanuman Idol) ವನ್ನು ಧ್ವಂಸಗೊಳಿಸಿದ್ದಾರೆ.

ರಾಂಚಿಯ ಮುಖ್ಯರಸ್ತೆಯಲ್ಲಿರುವ ದೇವಾಲಯದಲ್ಲಿ ಬೃಹತ್ ಹನುಮನ ವಿಗ್ರಹವನ್ನು ಇರಿಸಲಾಗಿತ್ತು. ಇದೀಗ ಕೀಡಿಗೇಡಿಗಳಿಂದ ಕೃತ್ಯ ನಡೆದಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದನ್ನೂ ಓದಿ: RSS ಭಯೋತ್ಪಾದಕ ಚಟುವಟಿಕೆ ಮಾಡಿದ್ದರೆ ಸರ್ಕಾರ ಕ್ರಮ ಕೈಗೊಳ್ಳಲಿದೆ: ಎಂಟಿಬಿ ನಾಗರಾಜ್‌

ಹನುಮಾನ್ ವಿಗ್ರಹದ ಕೈ ಕಾಲು, ತಲೆ ಹಾಗೂ ಮುಖದ ಭಾಗಕ್ಕೆ ಹಾನಿ ಮಾಡಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು (Jharkhand Police) ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನೂ ಬಂಧಿಸಿದ್ದಾರೆ. ಇದನ್ನೂ ಓದಿ: ರಾಜವರ್ಧನ್ ನಟನೆಯ ‘ಗಜರಾಮ’ನಿಗೆ ಕ್ಲ್ಯಾಪ್ ಮಾಡಿ, ಹಾರೈಸಿದ ಅಭಿಷೇಕ್ ಅಂಬರೀಶ್

ಪರಿಸ್ಥಿತಿ ನಿಯಂತ್ರಣದಲ್ಲಿಡಲು ದೇಗುಲದ ಸುತ್ತ ಹಾಗೂ ರಾಂಚಿ ನಗರದಾದ್ಯಂತ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *