ಮೆಕ್ಕೆಜೋಳದ ಲಾರಿ ಪಲ್ಟಿ- ಮೂವರು ಕಾರ್ಮಿಕರು ಸಾವು, ನಾಲ್ವರಿಗೆ ಗಾಯ

ಹಾವೇರಿ: ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಕೊರಡೂರು ಗ್ರಾಮದ ಬಳಿ ನಡೆದಿದೆ.

(33)ಮಂಜುನಾಥ, (35)ಮಂಜುನಾಥ, (37)ಆನಂದ ಮೃತರಾಗಿದ್ದಾರೆ. ಮೃತರ ಹಾವೇರಿ ತಾಲೂಕಿನ ಇಚ್ಚಂಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಮೆಕ್ಕೆಜೋಳದ ಚೀಲವನ್ನ ಹಂದಿಗನೂರ ಗ್ರಾಮದಿಂದ ಲೋಡ್ ಮಾಡಿಕೊಂಡು ಹೊಸರಿತ್ತಿ ಗ್ರಾಮದ ಕಡೆಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಇದನ್ನೂ ಓದಿ: ಡ್ರಮ್ ಬಾರಿಸಿದ ಎಂಪಿ ಸಿಎಂ- ಕುಣಿದು ಕುಪ್ಪಳಿಸಿದ ಮಹಿಳೆಯರು

ಲಾರಿ ಕೆಳಗೆ ಸಿಲುಕಿಕೊಂಡು ಮೂವರ ಮೃತದೇಹಗಳನ್ನ ಸ್ಥಳೀಯರು ಹಾಗೂ ಪೊಲೀಸರು ಹೊರ ತೆಗೆಯುವ ಕಾರ್ಯ ಮಾಡಿದ್ದಾರೆ. ನಾಲ್ವರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸ್ಥಳಕ್ಕೆ ಗುತ್ತಲ ಪಿಎಸ್‍ಐ ಜಗದೀಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 2047ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿ ಹೊಂದಿದ್ದೇವೆ: ಮೋದಿ

Comments

Leave a Reply

Your email address will not be published. Required fields are marked *