ಮದುವೆ ಬೇಡವೆಂದ ಪ್ರಿಯಕರನ ಮೇಲೆ ಆ್ಯಸಿಡ್ ಎರಚಿದಳು

ತಿರುವನಂತಪುರ: ಪ್ರೇಮ ವೈಫಲ್ಯದಿಂದ ಕುಪಿತಗೊಂಡ ಯುವತಿಯೊಬ್ಬಳು ಯುವಕನ ಮೇಲೆ ಆ್ಯಸಿಡ್ ಎರಚಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿಯಲ್ಲಿ ನಡೆದಿದೆ.

ತಿರುವನಂತಪುರಂ ಜಿಲ್ಲೆಯ ಅರುಣ್ ಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಇಡುಕ್ಕಿ ಜಿಲ್ಲೆಯ ಆದಿಮಾಲಿಯ ಶಿಬಾ ಹಲ್ಲೆ ಮಾಡಿದ ಯುವತಿಯಾಗಿದ್ದಾಳೆ. ಅರುಣ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತನ್ನ ದೃಷ್ಟಿಯನ್ನು ಕಳೆದುಕೊಂಡಿದ್ದಾನೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನವೆಂಬರ್ 16ರಂದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

ಶಿಬಾ ಅರುಣ್‍ಕುಮಾರ್ ಅವರ ಮಾಜಿ ಗೆಳತಿಯಾಗಿದ್ದರು. ಇವರಿಬ್ಬರು ಸಾಮಾಜಿಕ ಜಾಲತಾಣದಲ್ಲಿ ಭೇಟಿಯಾಗಿ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಆದರೆ ಅರುಣ್‍ಕುಮಾರ್ ಬೇರೆಯೊಬ್ಬರನ್ನು ಮದುವೆಯಾಗುತ್ತಿರುವ ಸುದ್ದಿ ಕೇಳಿದ್ದ ಶಿಬಾ ಕೋಪಗೊಂಡಿದ್ದಳು. ಅಷ್ಟೇ ಅಲ್ಲದೇ ಬ್ರೆಕಪ್‍ನಿಂದಾಗಿ ಮಾನಸಿಕವಾಗಿ ಕುಗ್ಗಿದ್ದಳು. ನವೆಂಬರ್ 16ರಂದು ಸುಮಾರು 10 ಗಂಟೆ ವೇಳೆಗೆ ಆದಿಮಾಲಿ ಇರುಂಪುಪಾಲಂ ಕ್ರಿಶ್ಚಿಯನ್ ಚರ್ಚ್‍ಗೆ ಕಕರೆಸಿದ ಶಿಬಾ, ಅರುಣ್‍ಕುಮಾರ್ ಅವರ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ ಎಂದು ಪೊಲೀಸರು ತಿಳಿಸಿದರು. ಇದನ್ನೂ ಓದಿ: ರೈತರು ಸ್ಮಾರ್ಟ್‍ಫೋನ್ ಕೊಳ್ಳಲು 1500 ರೂ. ಆರ್ಥಿಕ ನೆರವು ಕೊಟ್ಟ ಸರ್ಕಾರ

ಈ ಕುರಿತಾದ ಪ್ರಕರಣದ ವೀಡಿಯೋ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆದಿಮಾಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಶಿಬಾಳನ್ನು ಬಂಧಿಸಿದ್ದಾರೆ. ಅರುಣ್ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸ್ಥಿತಿ ಚಿಂತಾಜನಕವಾಗಿದೆ.

Comments

Leave a Reply

Your email address will not be published. Required fields are marked *