ಪ್ರೇಯಸಿ ಕೈಕೊಟ್ಟಿದ್ದಕ್ಕೆ ಪ್ರಿಯಕರ ನೇಣಿಗೆ ಶರಣು!

ಬೆಂಗಳೂರು: ಪ್ರಿಯತಮೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಪ್ರಿಯಕರ ಪ್ರೇಮಿಗಳ ದಿನವೇ ನೇಣಿಗೆ ಶರಣಾದ ಘಟನೆ ಬನ್ನೇರುಘಟ್ಟ ಬಳಿಯ ಹುಳಿಮಾವಿನಲ್ಲಿ ನಡೆದಿದೆ.

ಕೊಳ್ಳೆಗಾಲ ಮೂಲದ ಮುತ್ತುರಾಜ್(22) ಮೃತ ಪ್ರಿಯಕರ. ಪ್ರಿಯತಮೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಮುತ್ತುರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಒಂದು ವರ್ಷದಿಂದ ಮುತ್ತುರಾಜ್ ಮತ್ತು ಯುವತಿ ಪ್ರೀತಿಸುತ್ತಿದ್ದರು. ಈ ನಡುವೆ ಪ್ರಿಯತಮೆಗೆ ಬೇರೊಬ್ಬ ಯುವಕನ ಜೊತೆ ಪ್ರೇಮಾಂಕುರವಾಗಿದೆ. ಈ ವಿಚಾರ ಸಂಬಂಧ ಎರಡು ದಿನದ ಹಿಂದೆ ಇಬ್ಬರು ಪರಸ್ಪರ ಜಗಳವಾಡಿಕೊಂಡಿದ್ದರು. ಮನನೊಂದಿದ್ದ ಮುತ್ತುರಾಜ್ ಇಂದು ನೇಣಿಗೆ ಶರಣಾಗಿದ್ದು, ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *