ಪುನೀತ್ ನಿಧನದಿಂದ ತುಂಬಲಾರದ ನಷ್ಟವಾಗಿದೆ: ವೆಂಕಯ್ಯ ನಾಯ್ಡು

ಬೆಂಗಳೂರು: ಇಂದು ನಡೆದ ಟೆಕ್ ಸಮ್ಮೇಳನಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಟ ಪುನೀತ್ ರಾಜ್‍ಕುಮಾರ್ ಅವರ ಅಗಲಿಕೆಯ ನೋವನ್ನು ವ್ಯಕ್ತಪಡಿಸಿದ್ದಾರೆ.

ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಬೆಂಗಳೂರು ಟೆಕ್ ಸಮ್ಮಿಟ್ ಉದ್ಘಾಟನೆ ಮಾಡಿದ್ದು ಸಂತೋಷವಿದೆ. ಆದರೆ ಕನ್ನಡದ ಸ್ಟಾರ್‌ ನಟ ಪುನೀತ್ ರಾಜ್‍ಕುಮಾರ್ ಕಳೆದುಕೊಂಡಿದ್ದೇವೆ. ಅವರು ಪ್ರತಿಭಾನ್ವಿತ ನಟರಾಗಿ ಗುರುತಿಸಿಕೊಂಡಿದ್ದರು. ಸಾಕಷ್ಟು ಜನಪ್ರಿಯತೆ ಹೊಂದಿದವರಾಗಿದ್ದರು. ಪುನೀತ್ ರಾಜ್‍ಕುಮಾರ್ ಅವರ ನಿಧನದಿಂದ ತುಂಬಲಾರದ ನಷ್ಟವಾಗಿದೆ ಎಂದು ಹೇಳುತ್ತಾ ಪುನೀತ್ ರಾಜ್‍ಕುಮಾರ್‌ಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ

ಟೆಕ್ ಸಮ್ಮೇಳನ ತಾಜ್ ವೆಸ್ಟೆಂಡ್ ಹೊಟೇಲಿನಲ್ಲಿ ನಡೆಯುತ್ತಿದೆ. ಇಂದಿನಿಂದ ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ರಾಜ್ಯಪಾಲ ಟಿ.ಸಿ.ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಐಟಿಬಿಟಿ ಸಚಿವ ಅಶ್ವಥ ನಾರಾಯಣ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಸೇರಿ ಹಲವು ಐಟಿ ಬಿಟಿ ವಲಯದ ರಾಷ್ಟ್ರೀಯ, ಅಂತರಾಷ್ಟ್ರೀಯ ಸಂಸ್ಥೆಗಳು, ಉದ್ಯಮಿಗಳು ಭಾಗಿಯಾಗಲಿದ್ದಾರೆ

Comments

Leave a Reply

Your email address will not be published. Required fields are marked *