ಹಾವು ಕಚ್ಚಿ ಎಂಟು ತಿಂಗಳ ತುಂಬು ಗರ್ಭಿಣಿ ಸಾವು

ಮಡಿಕೇರಿ: ಕೊಳಕುಮಂಡಲ ಹಾವೊಂದು ಕಚ್ಚಿದ ಪರಿಣಾಮ ಎಂಟು ತಿಂಗಳ ತುಂಬು ಗರ್ಭಿಣಿಯೊಬ್ಬರು ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಕುಶಾಲನಗರದ ಸುಚಿತ (36) ಮೃತ ದುರ್ದೈವಿ. ಸುಚಿತಗೆ ಶುಕ್ರವಾರ ರಾತ್ರಿ ತಮ್ಮ ಮನೆಯನ ಶೌಚ ಗೃಹದಲ್ಲಿ ಇರುವಾಗ ಕೊಳಕು ಮಂಡಲ ಹಾವು ಕಚ್ಚಿತ್ತು. ಹಾವು ಕಡಿತಕ್ಕೆ ಒಳಗಾದ ಮಹಿಳೆಯನ್ನು ಕುಶಾಲನಗರ ಸರ್ಕಾರಿ ಅಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.

ಕುಶಾಲನಗರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ತುಂಬು ಗರ್ಭಿಣಿ ಸುಚಿತಾ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಸಂಜೆ 7:30 ರ ಸರಿಸುಮಾರಿಗೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *