ಸಂತೋಷ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನನ್ನ ವಿರುದ್ಧದ ಸಿಡಿ ಪ್ರಕರಣದಂತೆಯೇ, ಗುತ್ತಿಗೆದಾರ ಸಂತೋಷ್ ಪಾಟೀಲ್ ಕೇಸ್ ಹಿಂದೆಯೂ ‘ಮಹಾನಾಯಕ’ ಇದ್ದಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಂತೋಷ್ ಪಾಟೀಲ್ ಮನೆಗೆ ಭೇಟಿ ನೀಡಿ ನಂತರ ಮಾತನಾಡಿದ ಅವರು, ಸಂತೋಷ್ ಪಾಟೀಲ್ ನನ್ನ ಹಳೆಯ ಕಾರ್ಯಕರ್ತ. ಸೋಮವಾರ ಸುದ್ದಿಗೋಷ್ಠಿ ಮಾಡಿ ಎಲ್ಲವನ್ನೂ ಬಿಚ್ಚಿಡುತ್ತೇನೆ. ಈ ಕೇಸ್ ಹಿಂದೆಯೂ ಮಹಾನಾಯಕ ಇದ್ದಾನೆ. ನನ್ನ ಸಿಡಿ ಕೇಸ್‌ನಲ್ಲಿ ಇದ್ದ ಮಹಾನಾಯಕನ ತಂಡ ಸಂತೋಷ ಕೇಸ್‌ನಲ್ಲೂ ಇದೆ. ಆ ನಾಯಕನ ಟೀಂ ಇಲ್ಲಿ ಕೆಲಸ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆ ಯಾವಾಗ? – ಬಿಜೆಪಿಯ ನೈತಿಕತೆ ಎಲ್ಲಿ ಹೋಯ್ತು?

ಸಂತೋಷ್ ಪಾಟೀಲ್ ನನ್ನ ಹಳೆಯ ಕಾರ್ಯಕರ್ತ. ನಾನು ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೂ ನನ್ನ ಜೊತೆ ಇದ್ದ ಮನುಷ್ಯ. ಬಿಜೆಪಿಯಲ್ಲಿದ್ದಾಗ ಬಿಜೆಪಿಯಲ್ಲಿ ಕೆಲಸ ಮಾಡಿದ. ಈಶ್ವರಪ್ಪ, ನನ್ನ ವಿರುದ್ಧ ಸೇಮ್ ಟೀಮ್ ಷಡ್ಯಂತ್ರ ಮಾಡಿದೆ. ಹೈಕಮಾಂಡ್ ನಾಯಕರ ಅನುಮತಿ ಪಡೆದು ಸುದ್ದಿಗೋಷ್ಠಿ ನಡೆಸುತ್ತೇನೆ ಎಂದಿದ್ದಾರೆ.

Comments

Leave a Reply

Your email address will not be published. Required fields are marked *