ಅಕ್ರಮ ಮರ ಸಾಗಾಟ- ಓರ್ವ ಅರೆಸ್ಟ್

ಮಡಿಕೇರಿ: ಅಕ್ರಮವಾಗಿ ಬೀಟೆ ಮರ ಸಾಗಿಸುತ್ತಿದ್ದ ಸಂದರ್ಭದಲ್ಲಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ತಂಡ ಮರ ಮತ್ತು ವಾಹನ ವಶಪಡಿಸಿಕೊಳ್ಳುವುದರೊಂದಿಗೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾರ್ಗದರ್ಶನದಲ್ಲಿ ಸೋಮವಾರಪೇಟೆ ತಾಲೂಕಿನ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಮತ್ತು ಡಿಆರ್ ಎಫ್‍ಓ ಮಹದೇವ ನಾಯಕ್ ನೇತೃತ್ವದಲ್ಲಿ ಕಳೆದ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಕುಶಾಲನಗರ ಸಮೀಪ ಅಕ್ರಮವನ್ನು ಪತ್ತೆ ಹಚ್ಚಲಾಗಿದೆ.

ಆರೋಪಿ ಮಾಲ್ದಾರೆಯ ಅಶ್ರಫ್ ಎಂಬಾತ ಮಾರುತಿ 800 ಕಾರ್ (ಕೆಎ.05.ಎಂಆರ್.6728)ನಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಇಲಾಖೆ ಮೊಕದಮೆ ದಾಖಲಿಸಿದ್ದು, ತನಿಖೆ ಕೈಗೊಂಡಿದೆ.

Comments

Leave a Reply

Your email address will not be published. Required fields are marked *