ಮಾಲೀಕನ ಮೇಲಿದ್ದ ಸಿಟ್ಟಿಗೆ ವಿಮಾನದಲ್ಲಿ ಬಂದು ಕಳ್ಳತನ ಮಾಡ್ಕೊಂಡು ಎಸ್ಕೇಪ್!

ಬೆಂಗಳೂರು: ಮಾಲೀಕನ ಮೇಲಿನ ಸಿಟ್ಟಿಗೆ ಕಾರ್ಮಿಕನೊಬ್ಬ ವಿಮಾನದಲ್ಲಿ ಬಂದು ಕಳ್ಳತನ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಕಳ್ಳ ಕಾರ್ಮಿಕ 2 ಲಕ್ಷ ಹಣ ದೋಚಿ ಪರಾರಿ ಆಗಿದ್ದಾನೆ. ಬಸವನಗುಡಿ ಠಾಣಾ ವ್ಯಾಪ್ತಿಯ ರಾಮ್ ದೇವ್ ಬಟ್ಟೆ ಶಾಪ್‍ನಲ್ಲಿ ಈ ಘಟನೆ ನಡೆದಿದೆ. ಕಳ್ಳತನ ಆರೋಪಿ ಐದು ವರ್ಷಗಳ ಹಿಂದೆ ಇದೇ ಅಂಗಡಿಯಲ್ಲಿ ಕೆಲಸಗಾರನಾಗಿದ್ದ ಎನ್ನಲಾಗಿದೆ.

ಕಳ್ಳತನ ಮಾಡಿ ಸಿಕ್ಕಾಕಿಕೊಂಡಿದ್ದ ಇವನನ್ನ ಕೆಲಸದಿಂದ ತೆಗೆಯಲಾಗಿತ್ತು. ಇದನ್ನೇ ದ್ವೇಷವಾಗಿಟ್ಟುಕೊಂಡಿದ್ದ ಆರೋಪಿ ಆಗಾಗ ಬಂದು ನೋಡಿ ಹೋಗ್ತಿದ್ದ. ಕಳೆದ ವಾರ ಅಂಗಡಿಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಅಂಗಡಿ ಡ್ರಾಯರ್ ನಲ್ಲಿದ್ದ 2 ಲಕ್ಷ ನಗದು ಎತ್ತಿಕೊಂಡು ಹೋಗಿದ್ದಾನೆ. ಇದನ್ನೂ ಓದಿ: ಕನ್ನಡಕ್ಕಾಗಿ ಪ್ರಾಣ ಕೊಡೋಕು ಸಿದ್ಧ: ಶಿವಣ್ಣ ಖಡಕ್‌ ಮಾತು

ರಾಜಸ್ಥಾನದಿಂದ ಫ್ಲೈಟ್‍ನಲ್ಲಿ ಬಂದು ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಈ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‍ನಲ್ಲಿ ಅಶ್ಲೀಲ ವೀಡಿಯೋ ಶೇರ್ ಮಾಡಿದ ಶಿಕ್ಷಕನ ಬಂಧನ

Comments

Leave a Reply

Your email address will not be published. Required fields are marked *