ಟವರ್ ಏರಿ ಅಣ್ಣನ ಮೃತದೇಹಕ್ಕಾಗಿ ಗೋಗರೆಯುತ್ತಿರುವ ತಮ್ಮ!

ಮಂಡ್ಯ: ಯುವತಿ ಮನೆಯವರು ಬೆದರಿಕೆ ಹಾಕಿದ್ದಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅಣ್ಣನ ಮೃತದೇಹವನ್ನು ಆಸ್ಪತ್ರೆ ಸಿಬ್ಬಂದಿ ನೀಡುತ್ತಿಲ್ಲ ಎಂದು ಆರೋಪಿಸಿ ತಮ್ಮನೊಬ್ಬ ಟವರ್ ಏರಿ ಪ್ರತಿಭಟನೆ ಮಾಡಿದ್ದಾನೆ.

ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆ ಮುಂದೆ ಬೇಡದಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಟಿ ರವಿ ಎರಡು ತಿಂಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದನು. ಯುವತಿ ಮನೆಯವರ ಬೆದರಿಕೆಗೆ ಹೆದರಿ ರವಿ ಕಿಕ್ಕೇರಿ ಪೊಲೀಸ್ ಠಾಣೆಯ ಮುಂದೆ ವಿಷ ಸೇವಿಸಿದ್ದನು.

ರವಿಯನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ರವಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಬಿ.ಟಿ ರವಿ ಮೃತಪಟ್ಟಿದ್ದಾನೆ. ಬೆಳಿಗ್ಗೆ ಮೃತಪಟ್ಟಿದ್ದರು, ಆಸ್ಪತ್ರೆ ವೈದ್ಯಾಧಿಕಾರಿಗಳು ಮೃತ ದೇಹ ಕೊಡಲಿಲ್ಲ. ಹಾಗಾಗಿ ಕಿಕ್ಕೇರಿ ಪೊಲೀಸ್ ಠಾಣೆಯ ಮುಂದೆ ಟವರ್ ಏರಿ ನಮ್ಮ ಅಣ್ಣನ ಮೃತದೇಹ ಕೊಡಿಸಿ ಎಂದು ರವಿ ತಮ್ಮ ವಿಜಯ್ ಗೋಗರಿಯುತ್ತಿದ್ದಾರೆ.

ಈ ಬಗ್ಗೆ ಯುವತಿಯ ಮನೆಯವರ ಮೇಲೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Comments

Leave a Reply

Your email address will not be published. Required fields are marked *