ಪಾದಚಾರಿಗಳ ಮೇಲೆ ಹರಿದ ಲಾರಿ – ಚಕ್ರಕ್ಕೆ ಸಿಲುಕಿ ಓರ್ವ ಸಾವು, ಮತ್ತೊಬ್ಬ ಗಂಭೀರ

ಬೆಂಗಳೂರು: ವೇಗವಾಗಿ ಬಂದ ನೀರಿನ ಟ್ಯಾಂಕರ್ ರಸ್ತೆ ದಾಟುತ್ತಿದ್ದವರ ಮೇಲೆ ಹರಿದ ಪರಿಣಾಮ ಓರ್ವ ಸಾವನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಬಳಿ ರಸ್ತೆ ದಾಟುವಾಗ ನಿರ್ಲಕ್ಷ್ಯದಿಂದ ವೇಗವಾಗಿ ಬಂದ ನೀರಿನ ಟ್ಯಾಂಕರ್ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯೊಬ್ಬ ಟ್ಯಾಂಕರ್ ಮುಂದಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನು ಅಪಘಾತದ ನಂತರ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *