ಮಗಳ ಕನಸನ್ನ ಪೂರ್ಣಗೊಳಿಸಲು ಹೊರಟ ತಂದೆ ಅಪಘಾತದಲ್ಲಿ ಸಾವು

ಚಿಕ್ಕಬಳ್ಳಾಪುರ: ಆಂಧ್ರ ಪ್ರದೇಶದ ಅನಂತಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮಗಳ ಕನಸನ್ನು ಪೂರ್ಣ ಮಾಡಲು ಹೊರಟ ತಂದೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಮಂಜುನಾಥ್ ಅಯ್ಯರ್ (45) ಅಂತ ತಿಳಿದು ಬಂದಿದೆ. ಅಂದಹಾಗೆ ಚಿಂತಾಮಣಿ ನಗರದ ಅಶ್ವಿನಿ ಬಡಾವಣೆಯ ಗುತ್ತಿಗೆದಾರರಾಗಿದ್ದ ಮಂಜುನಾಥ್ ಅಯ್ಯರ್ ತಮ್ಮ ಮಗಳಾದ ಕಾವ್ಯಾರನ್ನ ಐಎಎಸ್ ಕೋಚಿಂಗ್‍ಗೆ ಹೈದರಾಬಾದ್‍ಗೆ ಬಿಟ್ಟು ಬರಲು ತೆರಳುತ್ತಿದ್ದರು.

ಮಾರ್ಗ ಮಧ್ಯೆ ಅನಂತಪುರದ ಬಳಿ ಕಾರು ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಅಪಘಾತದಲ್ಲಿ ಮಂಜುನಾಥ್ ಅಯ್ಯರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಯಲ್ಲಪ್ಪ, ಮಗಳು ಕಾವ್ಯ ಹಾಗೂ ಕೆಲಸದಾಳುವಿನ ಮಗ ವಿನಯ್ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆ ಅನಂತಪುರ ಜಿಲ್ಲೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *