ಗಣೇಶ ಮೂರ್ತಿ ವಿಸರ್ಜನೆ ಸ್ಥಳದಲ್ಲಿ ವ್ಯಕ್ತಿ ಆತ್ಮಹತ್ಯೆ- ಸಿಸಿಟಿವಿ ಕ್ಯಾಮೆರಾದಲ್ಲಿ ಸತ್ಯ ಬಯಲು

ರಾಯಚೂರು: ನಗರದ ಗಣೇಶ ಮೂರ್ತಿಗಳ ವಿಸರ್ಜನೆ ಮಾಡುವ ಸ್ಥಳದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಬಾಬು(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಾಬು ನಗರದ ಖಾಸಬಾವಿಯಲ್ಲಿ ಗಂಗಾ ನಿವಾಸ ಪ್ರದೇಶದ ನಿವಾಸಿ ಆಗಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ನಗರವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.

ಗಣೇಶ ವಿಸರ್ಜನೆ ವೇಳೆ ದುರಂತ ನಡೆದಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ರಾತ್ರಿ ವೇಳೆ ಬಾಬು ಖಾಸಬಾವಿಗೆ ಇಳಿದು ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಸುಮಾರು ಮೂರು ಗಂಟೆ ಕಾಲ ಖಾಸಬಾವಿಯಲ್ಲಿ ಶವಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದಾರೆ. ಮಾನಸಿಕ ಅಸ್ವಸ್ಥನಾಗಿದ್ದ ಬಾಬು ಮನೆಯಿಂದ ನೇರವಾಗಿ ಖಾಸಬಾವಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಬಗ್ಗೆ ಸದರಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *