ಲವ್ವರ್ ಮಾತಾಡಲು ನಿರಾಕರಿಸಿದಳೆಂದು ಆಸ್ಪತ್ರೆ ವೈದ್ಯ, ರೋಗಿಗಳಿಗೆ ಚಾಕುವಿನಿಂದ ಇರಿದ!

ಗ್ಯಾಂಗ್ಟಾಕ್: ಫೋನ್ ಕರೆಯನ್ನು ಸ್ವೀಕರಿಸದೆ ಇರುವ ಪ್ರಿಯಕರ, ಆಕೆ ಕೆಲಸ ಮಾಡುವ ಆಸ್ಪತ್ರೆಯ ವೈದ್ಯ ಹಾಗೂ ರೋಗಿಗಳಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ ಮಾಡಿರುವ ಘಟನೆ ಸಿಕ್ಕಿಂ ಎಸ್‌ಟಿಎನ್‌ಎಂ ಆಸ್ಪತ್ರೆಯಲ್ಲಿ ನಡೆದಿದೆ.

ತಂಗಚ್ಚಿನ್ ಹಲ್ಲೆ ಮಾಡಿದ ಆರೋಪಿ. ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಚೂರಿ ಇರಿತಕ್ಕೆ ವೈದ್ಯರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.

ಇಬ್ಬರು ನಡುವೆ ಹಲವು ದಿನಗಳಿಂದ ಮುನಿಸು ಇತ್ತು. ಅವಳು ಆತನೊಂದಿಗೆ ಮಾತನಾಡಲು ನಿರಾಕರಿಸಿದ್ದಾಳೆ. ಈ ವಿಚಾರವಾಗಿ ಕೋಪಗೊಂಡ ಆತ ಆಸ್ಪತ್ರೆಯಲ್ಲಿರುವವರ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ. ಚೂರಿ ಇರಿತಕ್ಕೊಳಗಾದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಉತ್ತರಾಖಂಡದ ಆರೋಗ್ಯ ಸಚಿವರ ಕಾರು ಅಪಘಾತ!

ಗೆಳತಿಯನ್ನು ಭೇಟಿಯಾಗಲು ಹೋದಾಗ ಚಾಕುವನ್ನು ಏಕೆ ಹಿಡಿದುಕೊಂಡಿದ್ದೀಯಾ ಎಂದು ಕೇಳಿದಾಗ, ಆಕೆಯ ಸೋದರಮಾವನನ್ನು ಕೊಲ್ಲಲು ಯೋಜಿಸಿದ್ದಾಗಿ ತಂಗಚ್ಚಿನ್ ಪೊಲೀಸರಿಗೆ ತಿಳಿಸಿದ್ದಾನೆ. ಇಬ್ಬರು ಹಣಕಾಸಿನ ವಿಚಾರದಲ್ಲಿ ಜಗಳವಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಅಪ್ಪು ಸಮಾಧಿಗೆ ಧಾರವಾಡದಿಂದ ನಡೆದೇ ಬಂದ ಅಭಿಮಾನಿ

Comments

Leave a Reply

Your email address will not be published. Required fields are marked *