ಹಿರಣ್ಯಕೇಶಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ – ಹುಡುಕಾಟದಲ್ಲಿ ಪೊಲೀಸರು

ಚಿಕ್ಕೋಡಿ: ತುಂಬಿ ಹರಿಯುತ್ತಿರುವ ಹಿರಣ್ಯಕೇಶಿ ನದಿಯಲ್ಲಿ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದು, ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಸಂಕೇಶ್ವರ ಪಟ್ಟಣ ನಿವಾಸಿ ಅಸ್ಲಮ ಜಮಾದಾರ(34) ನದಿ ಪಾಲಾಗಿರುವ ವ್ಯಕ್ತಿ. ಜಮಾದಾರ ಅವರು ಉಕ್ಕಿ ಹರಿಯುತ್ತಿರುವ ಹಿರಣ್ಯಕಾಶಿ ನದಿಯ ಬಳಿ ಬೈಕ್ ಮೇಲೆ ದಂಡೆಗೆ ಹೋದಾಗ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದಾರೆ.

ಈ ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಜಮಾದಾರ ಅವರಿಗೆ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಬೆಳಗಾವಿಯಲ್ಲಿ ನಿರಂತರ ಮಳೆಯಿಂದ ಹಿರಣ್ಯಕೇಶಿ ನದಿ ತುಂಬಿ ಹರಿಯುತ್ತಿದೆ. ಆದ್ದರಿಂದ ಜಮಾದಾರ ಕೊಚ್ಚಿ ಹೋಗಿದ್ದರಿಂದ ಬದುಕುಳಿದಿರುವುದು ಕಷ್ಟ ಎಂದು ಪೊಲೀಸರು ಶಂಕಿಸಿದ್ದಾರೆ.

ಈ ಘಟನೆ ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *