ಬಾಲಕನಿಗೆ ಲೈಂಗಿಕ ಕಿರುಕುಳ – ವ್ಯಕ್ತಿ ಬಂಧನ

ಮಂಗಳೂರು: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಜೈಲು ಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಸುರೇಶ್ ಪ್ರಭು (31) ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಬಂಟ್ವಾಳದ ಕನ್ಯಾನ ಗ್ರಾಮ ನಿವಾಸಿಯಾಗಿರುವ ಸುರೇಶ್ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದನು.

ಫೆ. 1ರಂದು ಬಾಲಕ ಶಾಲೆಯಿಂದ ತನ್ನ ಮನೆಗೆ ತೆರಳುತ್ತಿದ್ದನು. ಈ ವೇಳೆ ಸುರೇಶ್ ಬಾಲಕನನ್ನು ಬಲವಂತವಾಗಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿ ಹಿಂಸೆ ನೀಡಿದ್ದಾರೆ. ಈ ಬಗ್ಗೆ ಬಾಲಕ ತನ್ನ ತಾಯಿಯ ಬಳಿ ಹೇಳಿಕೊಂಡಿದ್ದನು.

ವಿಷಯ ತಿಳಿಯುತ್ತಿದ್ದಂತೆ ಬಾಲಕನ ತಾಯಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ಸುರೇಶ್ ಪ್ರಭು ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Comments

Leave a Reply

Your email address will not be published. Required fields are marked *