ರೇವಣ ಸಿದ್ದೇಶ್ವರ ಬೆಟ್ಟದಿಂದ ಬಿದ್ದು ಯುವಕ ಸಾವು

ರಾಮನಗರ: ರೇವಣ ಸಿದ್ದೇಶ್ವರ ಬೆಟ್ಟದಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿ ಭರತ್(28) ಮೃತ ದುರ್ದೈವಿ. ಏಕಶಿಲಾ ಬೆಟ್ಟವಾಗಿರುವ ರೇವಣಸಿದ್ದೇಶ್ವರ ಬೆಟ್ಟದ ವಿಕ್ಷಣೆಗೆಂದು ನಾಲ್ಕು ಜನ ಸ್ನೇಹಿತರ ಜೊತೆ ಬಂದಿದ್ದರು. ಈ ವೇಳೆ ಬೆಟ್ಟ ಹತ್ತುತ್ತಿರುವಾಗ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಭರತ್ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಪೈ ಇಂಟರ್ ನ್ಯಾಷನಲ್ ಕಂಪೆನಿಯಲ್ಲಿ ಸೇಲ್ಸ್ ಎಕ್ಷುಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು.

ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *