ಮನೆ ಮುಂದೆ ಮಲಗಿದ್ದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ!

ತುಮಕೂರು: ಮನೆ ಮುಂದಿನ ಅಂಗಳದಲ್ಲಿ ಮಲಗಿದ್ದ ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಹಾಗಲವಾಡಿಯಲ್ಲಿ ನಡೆದಿದೆ.

42 ವರ್ಷದ ಲೋಕೇಶ್ ಕೊಲೆಯಾದ ವ್ಯಕ್ತಿ. ಮಂಗಳವಾರ ಮಧ್ಯರಾತ್ರಿ ಸುಮಾರು 1.30ರ ಸುಮಾರಿಗೆ ಬಂದ ದುಷ್ಕರ್ಮಿಗಳು ಏಕಾಏಕಿಯಾಗಿ ತಲೆಗೆ ಮಚ್ಚಿನಿಂದ ಹೊಡೆದು ಪರಾರಿಯಾಗಿದ್ದಾರೆ. ಮಚ್ಚಿನ ಏಟಿಗೆ ಲೋಕೇಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೊಲೆಗೆ ಕಾರಣವೇನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಸಂಬಂಧ ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಶೋಧ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *