ಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆ

CRIME 2

ಬೆಳಗಾವಿ: ಹೆಂಡತಿ ಮನೆಗೆ ಬಂದಿದ್ದ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರ ಹತ್ಯೆಗೈದಿರುವ ಘಟನೆ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ನಿವಾಸಿ ದುಂಡಯ್ಯಾ ನಂದಿಕೊಳ್ಳಮಠ (42) ಕೊಲೆಯಾದ ವ್ಯಕ್ತಿ. ದುಂಡಯ್ಯಾ ನಂದಿಕೊಳ್ಳಮಠ ಅವರು ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿದ ಹೆಂಡತಿ ಮನೆಗೆ ಬಂದಿದ್ದರಂತೆ, ಈ ವೇಳೆ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ತಲೆಯ ಭಾಗಕ್ಕೆ ಹಲ್ಲೆಗೈದು ಕೊಂದು ಪರಾರಿಯಾಗಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಬ್ಯಾಂಕ್ ಮ್ಯಾನೇಜರ್ ಗುಂಡಿಕ್ಕಿ ಹತ್ಯೆ

ನಂತರ ಘಟನಾ ಸ್ಥಳಕ್ಕೆ ಆಗಮಿಸಿದ ಗೋಕಾಕ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ

Comments

Leave a Reply

Your email address will not be published. Required fields are marked *