3-4 ತಿಂಗ್ಳಲ್ಲಿ ಸರ್ಕಾರ ಪತನವಾದ್ರೆ ಸ್ವಾಮೀಜಿಗೆ ಹೆಬ್ಬೆರಳು ದಾನ ಮಾಡ್ತೇನೆ- ಬಿಜೆಪಿ ಕಾರ್ಯಕರ್ತ

ಮಂಡ್ಯ: ಕೋಡಿ ಮಠದ ಶ್ರೀಗಳ ಹೇಳಿಕೆ ಖಂಡಿಸಿ ಮಂಡ್ಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಅವರು ಸವಾಲು ಹಾಕಿದ್ದಾರೆ.

ನಿಮ್ಮ ಭವಿಷ್ಯ ನಿಜವಾದರೆ ಹೆಬ್ಬೆರಳು ಕಟ್ ಮಾಡಿಕೊಂಡು ನಿಮ್ಮ ಪಾದಕ್ಕೆ ಅರ್ಪಿಸುತ್ತೇನೆ. ಒಂದು ವೇಳೆ ಸರ್ಕಾರ ಅವಧಿ ಪೂರ್ಣಗೊಳಿಸಿದರೆ ಶ್ರೀಗಳು ನನ್ನನ್ನು ಮಠದ ಶಿಷ್ಯನಾಗಿ ಸ್ವೀಕರಿಸುವಂತೆ ಆಗ್ರಹಿಸಿದ್ದಾರೆ.

ಕಾರ್ಯಕರ್ತನ ಸವಾಲೇನು..?
ನಿನ್ನೆ ಕೋಡಿ ಮಠದ ಸ್ವಾಮಿಗಳು ಇನ್ನು 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಹೇಳಿದರು. ಒಂದು ವೇಳೆ 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾದರೆ ಹಿಂದೆ ಏಕಲವ್ಯ ದ್ರೋಣಾಚಾರ್ಯರಿಗೆ ತನ್ನ ಬಲಗೈ ಹೆಬ್ಬೆರಳನ್ನು ಯಾವ ರೀತಿ ದಾನವಾಗಿ ನೀಡಿದ್ದಾನೋ ಅದೇ ರೀತಿ ನನ್ನ ಬಲಗೈ ಹೆಬ್ಬೆರಳನ್ನು ಸ್ವಾಮೀಜಿಗಳಿಗೆ ದಾನವಾಗಿ ಕೊಡುತ್ತೇನೆ. ಒಂದು ವೇಳೆ ಬಿಜೆಪಿ ಪೂರ್ಣಾವಧಿ ಸರ್ಕಾರ ಮಾಡಿದರೆ ಬೇರೇನೂ ಬೇಡ ನಿಮ್ಮ ಶಿಷ್ಯನಾಗಿ ನನ್ನನ್ನು ಸ್ವೀಕರಿಸಬೇಕಾಗಿ ಸ್ವಾಮೀಜಿ ಹಾಗೂ ಮಠದ ಭಕ್ತನಾಗಿ ಮನವಿ ಮಾಡಿಕೊಂಡರು.

ಶ್ರೀಗಳು ಹೇಳೀದ್ದೇನು..?
ಗುರುವಾರ ಹಾವೇರಿಯಲ್ಲಿ ಮಾತನಾಡಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಬಿಎಸ್‍ವೈ ಸರ್ಕಾರದ ಪತನದ ಮುನ್ಸೂಚನೆ ನೀಡಿದ್ದರು. ಮಧ್ಯಂತರ ಚುನಾವಣೆ ಸನಿಹ ಬಂದಿದೆ ಎಂಬ ವಿಚಾರ ಕೇಳಿದಾಗ ಮೈತ್ರಿ ಸರ್ಕಾರ 14 ತಿಂಗಳಿಗೆ ಪತನವಾಗಿದೆ. ಇನ್ನೂ ಕಾಲಾವಕಾಶ ಇದೆ ಕಾದು ನೋಡಿ. 18 ತಿಂಗಳ ನಂತರ ಮತ ಭಿಕ್ಷೆ ಎಂದು ನಾನು ಚುನಾವಣೆ ಪೂರ್ವದಲ್ಲಿ ಹೇಳಿದ್ದೆ. ಈಗ 14, 15 ತಿಂಗಳು ಮುಗಿದಿದೆ, ಇನ್ನೂ ಮೂರು ನಾಲ್ಕು ತಿಂಗಳು ಕಾದು ನೋಡಿ ಎಂದು ಕೋಡಿಹಳ್ಳಿ ಮಠದ ಶ್ರೀ ಭವಿಷ್ಯ ಹೇಳಿದ್ದರು.

Comments

Leave a Reply

Your email address will not be published. Required fields are marked *