ಬಸ್ ಪಲ್ಟಿ – 10ಕ್ಕೂ ಹೆಚ್ಚು ರೈತರಿಗೆ ಗಾಯ

ಮಂಡ್ಯ: ರೇಷ್ಮೆ ಕೃಷಿಯ ಅಧ್ಯಯನದ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ರೈತರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮುಡೇನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರೇಷ್ಮೆ ಇಲಾಖೆಯಿಂದ 50ಕ್ಕೂ ಹೆಚ್ಚು ರೈತರನ್ನು ಖಾಸಗಿ ಬಸ್ಸಿನಲ್ಲಿ ರೇಷ್ಮೆ ಕೃಷಿ ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋಗಲಾಗುತಿತ್ತು. ಈ ವೇಳೆ ಮದ್ದೂರು ತಾಲೂಕಿನ ಮುಡೇನಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಸ್ ಉರುಳಿದೆ.

ಈ ವೇಳೆ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ರೈತರಿಗೆ ಗಾಯಗಳಾಗಿವೆ. ಗಾಯಗೊಂಡ ರೈತರನ್ನು ಕೆಎಂ ದೊಡ್ಡಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಎಂ ದೊಡ್ಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments

Leave a Reply

Your email address will not be published. Required fields are marked *