ಮಂಡ್ಯ: ನಾನು ಜೆಡಿಎಸ್ ಬಿಡಲ್ಲ, ಶಿವರಾಮೇಗೌಡನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ. ನಾನಾಗಿಯೇ ಹೋಗಬೇಕೇ ಹೊರತು, ಯಾರೂ ನನ್ನ ಕರೆಯೋದಿಲ್ಲ. ಜೆಡಿಎಸ್ ನಲ್ಲೇ ನನ್ನ ರಾಜಕೀಯ ಅಂತ್ಯ ಎಂದು ಸಂಸದ ಎಲ್ ಆರ್ ಶಿವರಾಮೇ ಗೌಡ ಹೇಳಿದ್ದಾರೆ.
ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ನನಗೆ ಯಾವ ಆಫರ್ ಸಹ ಬಂದಿಲ್ಲ. ಸೋಮವಾರ ಅನಿರೀಕ್ಷಿತವಾಗಿ ಬಿಜೆಪಿ, ಕಾಂಗ್ರೆಸ್ ನಾಯಕರ ಭೇಟಿ ಮಾಡಿದ್ದೇನೆ. ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಗೆಲುವು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ನನಗೆ ನಾಲ್ಕೂವರೆ ತಿಂಗಳ ಅಧಿಕಾರ ಸಾಕಾಗಿಲ್ಲ. ನನಗೆ 22 ವರ್ಷದಿಂದ ಅಧಿಕಾರ ಇರಲಿಲ್ಲ. ದೇವೇಗೌಡ, ಕುಮಾರಸ್ವಾಮಿ ಅಧಿಕಾರ ಕೊಟ್ಟಿದ್ದಾರೆ. ಕೆಲವರು ನನಗೆ ಅಧಿಕಾರ ಸಿಗದಂತೆ ತೊಂದರೆ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ರು.
ನನಗೆ ಈ ಬಾರಿ ಟಿಕೆಟ್ ಕೊಡದಿರೋದಕ್ಕೆ ಬೇಕಾದಷ್ಟು ಕಾರಣಗಳಿವೆ. ನನಗಿಂತ ಭಾರೀ ಅಂತರದಲ್ಲಿ ನಿಖಿಲ್ ಗೆಲ್ತಾರೆ. ನಿಖಿಲ್ ಕುಮಾರಸ್ವಾಮಿಗೆ ವಿರೋಧ ಕೇಳಿ ಬರುತ್ತಿರುವ ವಿಚಾರದ ಕುರಿತು ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ನಾನು ಚುನಾವಣೆಗೆ ನಿಂತಾಗ ನನ್ನ ವಿರುದ್ಧವೂ ಹಲವು ವಿರೋಧಗಳು ಕೇಳಿ ಬಂದಿತ್ತು ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply