ತಾಯಿ ಅಸ್ಥಿ ವಿಸರ್ಜನೆ ವೇಳೆ ಕಾವೇರಿ ಸಂಗಮದಲ್ಲಿ ಕೊಚ್ಚಿಹೋದ ಮಗ

ಮಂಡ್ಯ: ತಾಯಿಯ ಅಸ್ಥಿ ವಿಸರ್ಜನೆಗೆ ಆಗಮಿಸಿದ್ದ ಮಗ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ, ಗಂಜಾಂ ಬಳಿಯ ಕಾವೇರಿ ನದಿ ಸಂಗಮದಲ್ಲಿ ನಡೆದಿದೆ.

ಶ್ರೀಕಾಂತ್ (45) ಕೊಚ್ಚಿ ಹೋದ ವ್ಯಕ್ತಿ. ಬೆಂಗಳೂರಿನ ರಾಜಾಜಿ ನಗರದ ನಿವಾಸಿ ಶ್ರೀಕಾಂತ್ ಅವರ ತಾಯಿ ಅಂಬುಜಾ ಸಾವಿಗೀಡಾಗಿದ್ದರು. ಅವರ ಅಸ್ಥಿ ವಿಸರ್ಜನೆಗಾಗಿ 5 ಜನರ ಜೊತೆ ಸಂಗಮಕ್ಕೆ ಶ್ರೀಕಾಂತ್ ಆಗಮಿಸಿದ್ದರು.

ಈ ವೇಳೆ ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗಿಳಿದಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೋಲಿಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *