ದುಷ್ಕರ್ಮಿಗಳ ಕೃತ್ಯಕ್ಕೆ ಭತ್ತದ ಬೆಳೆ ಭಸ್ಮ

ಮಂಡ್ಯ: ಭತ್ತ ಕಟಾವು ಮಾಡಿ ಒಕ್ಕಣೆ ಮಾಡಲು ಮೆದೆ ಹಾಕಿದ್ದ ಭತ್ತದ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಹಾಕಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶಿವಪುರ ಬಳಿ ನಡೆದಿದೆ.

ಶಿವಪುರ ಗ್ರಾಮದ ರೈತ ವೆಂಕಟೇಶ್ ಎಂಬುವವರು ತಮ್ಮ ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಭತ್ತದ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದಾರೆ. ರೈತ ವೆಂಕಟೇಶ್ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಭತ್ತವನ್ನು ಕಟಾವು ಮಾಡಿ, ಒಕ್ಕಣೆ ಮಾಡಲು ಮೆದೆ ಹಾಕಿದ್ದರು.

ಆದರೆ ಯಾರೋ ದುಷ್ಕರ್ಮಿಗಳು ಬಂದು ಭತ್ತದ ಮೆದೆಗೆ ಬೆಂಕಿ ಹಾಕಿದ್ದಾರೆ. ಇದರಿಂದ ಭತ್ತದ ಮೆದೆ ಸಂಪೂರ್ಣವಾಗಿ ಭಸ್ಮವಾಗಿದೆ. ಈ ಘಟನೆಯಿಂದ ರೈತ ವೆಂಕಟೇಶ್‍ಗೆ ಸಾವಿರಾರು ರೂಪಾಯಿ ನಷ್ಟವಾಗಿದೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *