‘ಮನೆ ಮನೆಗೆ ಕಾಂಗ್ರೆಸ್’ಗೆ ಬಂದ ‘ಕೈ’ ಸಚಿವರಿಗೆ ಜನರ ಫುಲ್ ಕ್ಲಾಸ್!

ತುಮಕೂರು: ಮನೆ ಮನೆಗೆ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮಕ್ಕೆ ಹೊರಟ ಹಾಲಿ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಸ್ವಕ್ಷೇತ್ರದಲ್ಲಿ ಸಾರ್ವಜನಿಕರು ಸಚಿವರನ್ನೇ ತರಾಟೆ ತೆಗೆದುಕೊಂಡಿದ್ದಾರೆ.

ಶಿರಾ ತಾಲ್ಲೂಕಿನ ಚಿರತಹಳ್ಳಿ ಗ್ರಾಮಸ್ಥರು ಅಭಿವೃದ್ಧಿ ಕೆಲಸ ಮಾಡದ ಸಚಿವರ ವಿರುದ್ಧ ಸಚಿವರ ಕಾರಿಗೆ ಘೆರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಆಗಮಿಸಿದ್ದ ಸಚಿವ ಜಯಚಂದ್ರ ಅವರ ಕಾರು ಅಡ್ಡಗಟ್ಟಿದ ಗ್ರಾಮಸ್ಥರು ಚುನಾವಣೆ ಪ್ರಚಾರಕ್ಕೆ ಮಾತ್ರ ಗ್ರಾಮಕ್ಕೆ ಬರುತ್ತೀರಾ…? ಗೆದ್ದ ಮೇಲೆ ಇತ್ತ ಮುಖಮಾಡಿಯೂ ನೋಡಿಲ್ಲ. ಕಳೆದ ನಾಲ್ಕೂವರೆ ವರ್ಷದಿಂದ ಎಲ್ಲಿ ಹೋಗಿದ್ರಿ ಸ್ವಾಮಿ ಎಂದು ತರಾಟೆಗೆ ತೆಗೆದುಕೊಂಡರು. ಅಲ್ಲದೆ ಗ್ರಾಮಕ್ಕೆ ಬರದಂತೆ ಸಚಿವರನ್ನ ತಡೆದರು. ಮನೆಮನೆಗೆ ಕಾಂಗ್ರೆಸ್ ನ ಪ್ರಚಾರ ಕಾರ್ಯಕ್ರಮದ ಆರಂಭದಲ್ಲೇ ಸಚಿವರಿಗೆ ತರಾಟೆ ತೆಗೆದುಕೊಂಡಿರುವುದು ಸಚಿವರಿಗೆ ತೀವ್ರ ಮುಖಭಂಗ ಉಂಟಾಗಿದೆ.

ಕೊನೆಗೆ ಅರ್ಧ ಗಂಟೆ ನಂತರ ಪರಿಸ್ಥಿತಿ ಶಾಂತವಾದ ಬಳಿಕ ಸಚಿವರು ಮತ್ತೆ ಗ್ರಾಮಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Comments

Leave a Reply

Your email address will not be published. Required fields are marked *