ಕಾಂಗ್ರೆಸ್ ಮುಗಿಸೋದಕ್ಕೆ ಸಿದ್ದರಾಮಯ್ಯ ಪಕ್ಷಕ್ಕೆ ಬಂದ್ರು: ಜನಾರ್ದನ ಪೂಜಾರಿ

– ಮುಂದಿನ ದಿನಗಳಲ್ಲಿ ಮೋದಿಗೆ ನಿದ್ದೆ ಬರಲ್ಲ

ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸೋದಕ್ಕೆ ಪಕ್ಷ ಸೇರಿಕೊಂಡರು. ಸಿದ್ದರಾಮಯ್ಯನವರಿಂದ ಇಂದು ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ಸರ್ಕಾರ ಉಳಿಯುವಲ್ಲಿ ದೊಡ್ಡ ಗೌಡರದ್ದು ಮಹತ್ವದ ಪಾತ್ರವಿದೆ. ದೇವೇಗೌಡರನ್ನು ಯಾರು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ, ಕರ್ನಾಟಕದಲ್ಲಿ ರಾಜಕೀಯ ತುಂಬಾನೇ ಕೊಳಕಾಗಿದೆ. ಎಲ್ಲರಿಗೂ ನಾನು ಮಾಡಿದ್ದೇ ಸರಿ ಎಂಬ ಭಾವನೆ ಬಂದಿದೆ. ಅದಕ್ಕೆ ದಾರಿಯಲ್ಲಿ ಪೆಟ್ಟು ತಿಂದಿದ್ದಾರೆ. ಮುಂದಿನ ದಿನಗಳಲ್ಲಿ ಜನ ಪೆಟ್ಟು ಕೊಡವುದು ಬಾಕಿ ಇದೆ ಎಂದು ಪರೋಕ್ಷವಾಗಿ ಶಾಸಕರಾದ ಆನಂದ್ ಸಿಂಗ್ ಮತ್ತು ಗಣೇಶ್ ಗಲಾಟೆಗೆ ಬೇಸರ ವ್ಯಕ್ತಪಡಿಸಿದರು.

ಪ್ರಿಯಾಂಕಾ ಗಾಂಧಿ ನೆಹರು ಕುಟುಂಬದ ಕುಡಿ. ಪ್ರಿಯಾಂಕಾ ಆಗಮನದಿಂದ ಕಾಂಗ್ರೆಸಿಗೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ. ಇಷ್ಟು ದಿನ ಕಾಂಗ್ರೆಸ್ಸಿಗೆ ಸಿಗದ ಹೊಸ ಶಕ್ತಿ ಲಭ್ಯವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಧಾನಿ ಮೋದಿಗೆ ನಿದ್ದೆ ಬಾರದ ರೀತಿ ಆಗಲಿದೆ. ಪ್ರಿಯಾಂಕಾ ಪತಿ ರಾಬರ್ಟ್ ವಾದ್ರಾ ಅವರ ಮೇಲಿನ ಪ್ರಕರಣ ತನಿಖೆಯಾಗಿಲಿ. ಆ ಒಂದು ಪ್ರಕರಣದಿಂದ ಯಾವುದೇ ತೊಂದರೆಯಾಗಲ್ಲ. ಲೋಕಸಭೆಯಲ್ಲಿ ಏನಾಗುತ್ತೆ ಎಂಬುದನ್ನು ಕಾದು ನೋಡಿ ಎಂದು ಜನಾರ್ದನ ಪೂಜಾರಿ ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *