ತಲ್ವಾರ್ ಬೀಸಿ ಆತಂಕ ಸೃಷ್ಟಿಸಿದ ಯುವಕ

ಮಂಗಳೂರು: ಯುವಕನೊಬ್ಬ ರಸ್ತೆಯಲ್ಲಿ ತಲ್ವಾರ್ ಬೀಸಿ ಸಾರ್ವಜನಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪುಣ್ಚತ್ತಾರು ಎಂಬಲ್ಲಿ ನಡೆದಿದೆ.

ಅವಿನಾಶ್ ತಲ್ವಾರ್ ಬೀಸಿದ ಯುವಕ. ಈತ ಪುಣ್ಚತ್ತಾರು ಗ್ರಾಮದ ನಿವಾಸಿಯಾಗಿದ್ದು, ಪೇಟೆಯ ಸುತ್ತ ತಲವಾರು ಝಳಪಿಸುತ್ತಾ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದ್ದಾನೆ. ಅವಿನಾಶ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ.

ಸ್ಥಳೀಯರು ಹಾಗೂ ಪೋಲೀಸರು ಈತನನ್ನು ಹಿಡಿಯಲು ಪ್ರಯತ್ನಿಸಿದರೂ ಸಫಲವಾಗಿಲ್ಲ. ಪೊಲೀಸ್ ಜೀಪಿನ ಬಳಿಗೂ ಬಂದು ಈತ ತಲ್ವಾರ್ ಬೀಸಿದ್ದು, ಬಳಿಕ ಪೊಲೀಸರು ಹಾಗೂ ಸ್ಥಳೀಯರು ಉಪಾಯವಾಗಿ ಆತನನ್ನು ಹಿಡಿದು ಮಂಗಳೂರಿನ ಕಂಕನಾಡಿ ಮಾನಸಿಕ ಅಸ್ವಸ್ಥರ ಆಸ್ಪತ್ರೆಗೆ ದಾಖಲಿಸಿದ್ದಾರೆ.

Comments

Leave a Reply

Your email address will not be published. Required fields are marked *