ಭಯೋತ್ಪಾದಕರಿಗೆ ಹಣ ವರ್ಗವಣೆ – ಮಂಗ್ಳೂರಿನ ದಂಪತಿಗೆ 10 ವರ್ಷ ಕಠಿಣ ಶಿಕ್ಷೆ

ರಾಯಪುರ: ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಮಂಗಳೂರು ಮೂಲದ ದಂಪತಿಗೆ ಛತ್ತೀಸ್‌ಗಢ ರಾಯಪುರದ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.

POLICE JEEP

ಮಂಗಳೂರು ಮೂಲದ ಜುಬೇರ್ ಹುಸೇನ್(42), ಆತನ ಪತ್ನಿ ಆಯೇಷಾ ಬಾನೋ(39) ಮತ್ತು ಧೀರಜ್ ಸಾವೋ(21), ಪಪ್ಪು ಮಂಡಲ್ ಮೇಲಿನ ಆರೋಪ ಸಾಬೀತಾಗಿದೆ.

ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‍ಗಳಡಿ ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಈ ನಾಲ್ವರಿಗೆ ನ್ಯಾಯಧೀಶ ಅಜಯ್ ಸಿಂಗ್ ರಜಪೂತ್ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಗೆ ಬಲಿ ಕೊಡೋದಕ್ಕೆ ಅಲ್ಪಸಂಖ್ಯಾತರೇ ಸಿಗೋದಾ: ಜಮೀರ್‌ ಪ್ರಶ್ನೆ

ಏನಿದು ಪ್ರಕರಣ?
ಭಯೋತ್ಪಾದಕ ಸಂಘಟನೆಗಳ ಜೊತೆ ಸಂಬಂಧ ಹೊಂದಿದ ಆರೋಪದ ಮೇಲೆ 2013ರಲ್ಲಿ ಧೀರಜ್ ಸಾವೋನನ್ನು ಬಂಧಿಸಲಾಗಿತ್ತು. ಬೀದಿ ಬದಿಯಲ್ಲಿ ಹೋಟೆಲ್ ಮಾಡುತ್ತಿದ್ದ ಈತ ಇಂಡಿಯನ್ ಮುಜಾಹಿದೀನ್, ಸಿಮಿ ಸಂಘಟನೆ ಜೊತೆ ಸಂಬಂಧ ಹೊಂದಿದವರಿಗೆ ಪಾಕಿಸ್ತಾನದ ಖಾಲಿದ್ ಎಂಬವನಿಂದ ಹಣ ಪಡೆದು ಉಗ್ರರ ಖಾತೆಗೆ ರವಾನಿಸುತ್ತಿದ್ದನು. ಜುಬೇರ್ ಹುಸೇನ್ ಮತ್ತು ಆಯೇಷಾ ಬಾನೋ ಬ್ಯಾಂಕ್ ಖಾತೆಗೂ ಸಹ ಈತ ಹಣವನ್ನು ಜಮೆ ಮಾಡುತ್ತಿದ್ದನು.

ಯಾರಿದು ಆಯೇಷಾ?
ಈಕೆ ನಿಷೇಧಿತ ಸಿಮಿ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರರ ಜೊತೆ ನಂಟನ್ನು ಹೊಂದಿದ್ದಳು. ಅದು ಅಲ್ಲದೇ ಈಕೆ ಬಿಹಾರದ ಸುಮಾರು 50 ಬ್ಯಾಂಕ್ ಖಾತೆಯ ನೆಟ್ ಬ್ಯಾಂಕಿಂಗ್ ಅನ್ನು ಹೊಂದಿದ್ದಳು. ಈ ಮೂಲಕ ಉಗ್ರರಿಗೆ ಹಣವನ್ನು ಜಮೆ ಮಾಡುತ್ತಿದ್ದಳು. ಯಾರಿಗೂ ಸಂದೇಹ ಬರದಂತೆ ಆದಾಯ ತೆರಿಗೆ ಇಲಾಖೆಯ ಕಣ್ಣನ್ನು ತಪ್ಪಿಸಲು 49 ಸಾವಿರಕ್ಕಿಂತ ಕಡಿಮೆ ಹಣವನ್ನು ವರ್ಗವಣೆ ಮಾಡುತ್ತಿದ್ದಳು. ಭಯೋತ್ಪಾದನೆ ಪ್ರಕರಣದಲ್ಲಿ ನಾಲ್ಪರು ಬಂಧಕ್ಕೊಳಗಾದ ಬಳಿಕ 2013ರಲ್ಲಿ ಈಕೆಯನ್ನು ಬಿಹಾರದ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದರು.

Comments

Leave a Reply

Your email address will not be published. Required fields are marked *