ಬ್ಲಡ್ ಕ್ಯಾನ್ಸರ್‌ನಿಂದ ಬಳಲ್ತಿರೋ ಬಾಲಕಿಗೆ ಒಂದೇ ದಿನ 3ಲಕ್ಷ ಸಂಗ್ರಹಿಸಿದ ವಿಚಿತ್ರ ಜೀವಿ

ಮಂಗಳೂರು: ಬ್ಲಡ್ ಕ್ಯಾನ್ಸರ್ ಪೀಡಿತ ಪುಟ್ಟ ಕಂದಮ್ಮನ ಚಿಕಿತ್ಸೆಗಾಗಿ ಶ್ರೀ ಕಟೀಲು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಯುವಕರ ತಂಡವೊಂದು ವಿಶೇಷ ವೇಷ ಧರಿಸಿ 3,00,136 ರೂ. ಹಣ ಸಂಗ್ರಹಿಸಿ ಮಗುವಿನ ಪೋಷಕರಿಗೆ ನೀಡಿ ಮಾನವೀಯತೆ ಮೆರೆದಿದೆ.

ನಿಹಾರಿಕ ಎಂಬ 5 ವರ್ಷದ ಪುಟ್ಟ ಕಂದಮ್ಮ ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಚಿಕಿತ್ಸೆಗೆ 10 ಲಕ್ಷ ಆಗತ್ಯವಿದೆ. ಆದರೆ ನಿಹಾರಿಕಾಳ ತಂದೆ ತಾಯಿ ಬಡ ಕುಟುಂಬದವರಾಗಿದ್ದು, ಚಿಕಿತ್ಸೆ ಬೇಕಾದ ಹಣ ಸಂಗ್ರಹಿಸುವುದು ಕಷ್ಟವಾಗಿತ್ತು. ಹೀಗಾಗಿ ಮೂಡಬಿದಿರೆಯ ನೇತಾಜಿ ಬ್ರಿಗೇಡ್ ಯುವ ಸಂಘಟನೆಯ ಸದಸ್ಯರು ಸಹಾಯ ಮಾಡಬೇಕು ಎನ್ನುವ ಉದ್ದೇಶದಿಂದ ತಂಡದ ಸದಸ್ಯ ವಿಕ್ಕಿ ಶೆಟ್ಟಿ ಬೆದ್ರ ಎಂಬವರಿಗೆ ವಿಶೇಷ ವೇಷ ಧರಿಸಿ ಕಟೀಲು ಬ್ರಹ್ಮಕಲಶೋತ್ಸವದ ಒಂದು ದಿನ ಪೂರ್ತಿ ಭಕ್ತ ಸಮೂಹದ ಮುಂದೆ ದೇಣಿಗೆ ಸಂಗ್ರಹಿಸಿದ್ದರು.

ಬಾಲಕಿಯ ಚಿಕಿತ್ಸೆ ಹಾಗೂ ವಿಕ್ಕಿ ಶೆಟ್ಟಿಯ ಪರಿಶ್ರಮವನ್ನು ನೋಡಿದ ಕ್ಷೇತ್ರಕ್ಕೆ ಬಂದಿದ್ದ ಭಕ್ತರು, ತಮ್ಮ ಕೈಲಾದ ಹಣದ ಸಹಾಯವನ್ನು ನೀಡಿದ್ದರು. ಹೀಗೆ ಒಂದೇ ದಿನದಲ್ಲಿ 3,00,136 ರೂ. ಸಹಾಯ ಧನವನ್ನು ಸಂಗ್ರಹಿಸಿದ್ದರು. ಸಂಗ್ರಹವಾದ ಹಣವನ್ನು ಶಾಸಕ ಉಮಾನಾಥ ಕೋಟ್ಯಾನ್ ಹಾಗೂ ಕಟೀಲು ದೇವಾಲಯದ ಪ್ರಧಾನ ಅರ್ಚಕ ಹರಿನಾರಾಯಣ ಆಸ್ರಣ್ಣ ಅವರು ಮಗುವಿನ ಪೋಷಕರಿಗೆ ಹಸ್ತಾಂತರ ಮಾಡಿದರು.

Comments

Leave a Reply

Your email address will not be published. Required fields are marked *