ಬಸ್ಸಿನೊಳಗೇ ಮುಗ್ಗರಿಸಿ ಬಿದ್ದ ಸ್ಥಿತಿಯಲ್ಲಿ ಚಾಲಕನ ಶವ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಿಲ್ಲಿಸಿದ್ದ ಕೆಎಸ್ಆರ್‌ಟಿಸಿ ಬಸಿನ ಚಾಲಕನ ಮೃತದೇಹ ಬಸ್ಸಿನೊಳಗೆ ಮುಗ್ಗರಿಸಿ ಕುಳಿತ ಸ್ಥಿತಿಯಲ್ಲಿ ಕಂಡುಬಂದಿದ್ದು, ಹೃದಯಾಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಬೀದರ್ ಜಿಲ್ಲೆಯ ನಿವಾಸಿ, ಕೆಎಸ್ಆರ್‌ಟಿಸಿ ಚಾಲಕ ರೇವಣ್ಣಪ್ಪ ಮೃತಪಟ್ಟ ಚಾಲಕ. ಪುತ್ತೂರಿನಿಂದ ಮಂಗಳವಾರ ಸಂಜೆ ಕಡಬಕ್ಕೆ ಆಗಮಿಸಿದ ಬಸ್ಸನ್ನು ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಮೀಪ ಹೆದ್ದಾರಿಯ ಪಕ್ಕದಲ್ಲಿ ರಾತ್ರಿ ನಿಲುಗಡೆಗೊಳಿಸಲಾಗಿದೆ.

ಬೆಳಗ್ಗೆ ಶಾಂತಿಮೊಗರು ಮಾರ್ಗವಾಗಿ ಪುತ್ತೂರಿಗೆ ತೆರಳಬೇಕಿತ್ತು. ಆದರೆ ಬೆಳಗ್ಗೆ ನಿರ್ವಾಹಕ ಎದ್ದು ಚಾಲಕನನ್ನು ಕರೆಯಲೆಂದು ನೋಡಿದಾಗ ಚಾಲಕ ಮುಗ್ಗರಿಸಿ ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಕಬಡ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *