ಅಧಿಕಾರಿಯ ನಿದ್ರೆಗೆ ಭಂಗ-ಯಕ್ಷಗಾನ, ಭಜನೆ ನಿಲ್ಲಿಸುವಂತೆ ಪೊಲೀಸರಿಂದ ಒತ್ತಡ!

ಮಂಗಳೂರು: ಮಹಾಶಿವರಾತ್ರಿ ಜಾಗರಣೆಯ ಪ್ರಯುಕ್ತ ನಡೆಯುತ್ತಿದ್ದ ಭಜನೆ ಹಾಗೂ ಯಕ್ಷಗಾನವನ್ನು ನಿಲ್ಲಿಸಲು ಒತ್ತಡ ಹೇರಿದ್ದಾರೆ ಅನ್ನೋ ಆರೋಪವೊಂದು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ವಿರುದ್ಧ ಕೇಳಿಬಂದಿದೆ.

ಹೌದು, ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಜಾಗರಣೆಯ ಅಂಗವಾಗಿ ಭಜನೆಗಳು ಹಾಗೂ ಯಕ್ಷಗಾನ ನಡೆಯುತ್ತಿತ್ತು. ಈ ದೇವಸ್ಥಾನದ ಹತ್ತಿರದಲ್ಲೇ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಬಂಗಲೆ ಇದೆ. ಹೀಗಾಗಿ ಕಾರ್ಯಕ್ರಮದಿಂದ ಪೊಲೀಸ್ ಅಧಿಕಾರಿಯ ನಿದ್ದೆಗೆ ಭಂಗವಾಗಿದ್ದು, ಕಾರ್ಯಕ್ರಮ ನಿಲ್ಲಿಸಲು ಒತ್ತಡ ಹೇರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಕಾರ್ಯಕ್ರಮದಿಂದ ಕಿರಿಕಿರಿಯಾಗುತ್ತದೆ ಎಂದು ಪೊಲೀಸರು ಒತ್ತಡ ಹಾಕಿದ್ದಾರೆ. ಅಲ್ಲದೆ ಧ್ವನಿವರ್ಧಕ ಸ್ಥಗಿತಗೊಳಿಸಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ನಾಗರಿಕರ ದೂರು ನೆಪದಲ್ಲಿ ಕಾರ್ಯಕ್ರಮ ರದ್ದುಪಡಿಸಲು ಒತ್ತಾಯ ಮಾಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರ ನಡುವೆ ಜಟಾಪಟಿ ನಡೆದಿದೆ.

ಮಾಹಿತಿ ಪಡೆದ ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕ ಡಾ.ಭರತ್ ಶೆಟ್ಟಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ಜನಪ್ರತಿನಿಧಿಗಳ ಪ್ರವೇಶದಿಂದ ಜಟಾಪಟಿ ನಿಂತು ಕಾರ್ಯಕ್ರಮ ಮುಂದುವರಿದಿದೆ.


ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *