ಅರ್ಚಕರಿಗೆ ಲಾಠಿ ಏಟು – ಪೇದೆಯನ್ನು ಅಮಾನತುಗೊಳಿಸಿದ ಎಸ್‍ಪಿ

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ ಅರ್ಚಕರಿಗೆ ಲಾಠಿ ಏಟು ಕೊಟ್ಟ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‍ಪಿ ಆದೇಶ ಹೊರಡಿಸಿದ್ದಾರೆ.

ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಶಂಕರ್ ಸಂಸಿಯನ್ನು ಎಸ್‍ಪಿ ಎಂ. ಲಕ್ಷ್ಮೀ ಪ್ರಸಾದ್ ಅವರು ಅಮಾನತುಗೊಳಿಸಿದ್ದಾರೆ. ಮೇಲ್ನೋಟಕ್ಕೆ ದುರ್ವರ್ತನೆ ಕಂಡುಬಂದ ಹಿನ್ನೆಲೆಯಲ್ಲಿ ಪೇದೆಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಆದಿ ಸುಬ್ರಹ್ಮಣ್ಯದ ಅರ್ಚಕ ಶ್ರೀನಿವಾಸ್ ಮೇಲೆ ಶಂಕರ್ ಲಾಠಿ ಬೀಸಿದ್ದರು. ಸಂಜೆಯ ಪೂಜೆಗಾಗಿ ಆದಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿವುದಾಗಿ ದೇವಾಲದ ಕೀಯನ್ನು ತೋರಿಸಿದರೂ ಥಳಿಸಿದ್ದರು. ಇದರಿಂದ ಕೋಪಗೊಂಡ ಅರ್ಚಕ ವರ್ಗ ಎಸ್‍ಪಿ ಸಹಿತ ಐಜಿಪಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೇದೆ ಶಂಕರ್ ಅವರನ್ನು ಅಮಾನತುಗೊಳಿಸಲಾಗಿದೆ.

Comments

Leave a Reply

Your email address will not be published. Required fields are marked *