ಪುತ್ತೂರಿನಲ್ಲಿ ಮತ್ತೊಂದು ಅತ್ಯಾಚಾರ ಯತ್ನ ಬೆಳಕಿಗೆ

ಮಂಗಳೂರು: ಇತ್ತೀಚೆಗಷ್ಟೇ ಯುವತಿಯ ಮೇಲಾದ ಗ್ಯಾಂಗ್‍ರೇಪ್ ಸುದ್ದಿ ಹೊರಬರುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇಂದು ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಬೆಳಕಿಗೆ ಬಂದಿದೆ.

ಅಜಿತ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಅಜಿತ್ ಶಾಲೆಗೆ ಹೋಗುತ್ತಿದ್ದ ಬಾಲಕಿಯೊಬ್ಬಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಬಾಲಕಿಯನ್ನು ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಎಸ್‍ಪಿ ಬಿ.ಎಂ. ಲಕ್ಷ್ಮೀಪ್ರಸಾದ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯವನ್ನು ವಿಚಾರಿಸಿದ್ದಾರೆ. ಆರೋಪಿ ಅಜಿತ್‍ನನ್ನು ಸಂಪ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಫೆಬ್ರವರಿಯಲ್ಲಿ ಪುತ್ತೂರಿನ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ತನ್ನದೇ ಕಾಲೇಜಿನ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಬಳಿಕ ಅಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದರು. ಅತ್ಯಾಚಾರ ನಡೆಸಿದಲ್ಲದೇ ಅದನ್ನು ವಿಡಿಯೋ ಕೂಡ ಮಾಡಿದ್ದರು.

ಕಾಲೇಜಿನಲ್ಲಿ ನಡೆದ ಚುನಾವಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ಮಧ್ಯೆ ದ್ವೇಷ ಉಂಟಾಗಿತ್ತು. ಈ ಹಗೆ ತೀರಿಸಿಕೊಳ್ಳಲು ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಆರೋಪಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *