ಮಹಿಳೆಗೆ ಎದೆನೋವು – ಬಸ್ಸನ್ನೇ ಆಸ್ಪತ್ರೆಗೆ ಕೊಂಡೊಯ್ದ ಚಾಲಕ

ಮಂಗಳೂರು: ಬಸ್ಸಿನಲ್ಲಿ ಸಂಚರಿಸುತ್ತಿದ್ದ ಮಹಿಳೆಗೆ ಎದೆನೋವು ಕಾಣಿಸಿಕೊಂಡಾಗ ಮಾನವೀಯತೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಸಾಗಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಹೊರವಲಯ ತಲಪಾಡಿಯ ಕಿನ್ಯಾದಿಂದ ಮಂಗಳೂರಿಗೆ ಬರುತ್ತಿದ್ದ ಮಹೇಶ್ ಬಸ್‍ನಲ್ಲಿ ಮಹಿಳೆಯೊಬ್ಬರಿಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಬಸ್ಸನ್ನು ಚಾಲಕ ನೇರವಾಗಿ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ.

ಎದೆ ನೋವು ಕಾಣಿಸಿಕೊಂಡ ನಂತರ ತಡಮಾಡಿದರೆ ಅಪಾಯ ಸಂಭವಿಸಬಹುದು ಎಂಬ ದೃಷ್ಟಿಯಿಂದ ತಕ್ಷಣ ಜಾಗೃತರಾದ ಬಸ್ ಚಾಲಕ ಪ್ರಮೋದ್ ಹಾಗೂ ನಿರ್ವಾಹಕ ಅಶ್ವಿತ್ ಬಸ್ಸನ್ನು ಸಮಯಕ್ಕೆ ಬಸ್ ನಿಲ್ದಾಣ ತಲುಪಿಸುವ ಒತ್ತಡ ಇದ್ದರೂ ಕೂಡ ಮಾನವೀಯತೆ ಮೆರೆದಿದ್ದಾರೆ. ನೇರವಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕರ ಈ ಕಾರ್ಯಕ್ಕೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗಿದೆ.

Comments

Leave a Reply

Your email address will not be published. Required fields are marked *