ಮನ್‍ಕೀ ಬಾತ್ ಆರಂಭದಲ್ಲೇ ಸಿದ್ದಗಂಗಾ ಶ್ರೀಗಳನ್ನು ಸ್ಮರಿಸಿ ಗೌರವ ಸಲ್ಲಿಸಿದ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಲಿಂಗೈಕ್ಯರಾದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ನೆನಪಿಸಿಕೊಂಡಿದ್ದಾರೆ.

ಮನ್‍ಕೀ ಬಾತ್ ಆರಂಭದಲ್ಲೇ ಶ್ರೀಗಳನ್ನು ನೆನೆದ ಮೋದಿ, ಜನವರಿ 21ರಂದು ದೇಶಕ್ಕೆ ಶಾಕಿಂಗ್ ನ್ಯೂಸ್ ಎಂಬಂತೆ 111 ವರ್ಷದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಸುದ್ದಿ ಬಂತು. ಬಸವಣ್ಣನವರ ಕಾಯಕವೇ ಕೈಲಾಸ ಎನ್ನುವ ಮಾತಿನಂತೆ ಶಿವಕುಮಾರ ಸ್ವಾಮೀಜಿ ಬದುಕಿದ್ದರು. ಸಮಾಜ ಸೇವೆಗೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಹೇಳಿ ಸ್ಮರಿಸಿಕೊಂಡರು.

ಇಂಗ್ಲಿಷ್, ಸಂಸ್ಕೃತ, ಕನ್ನಡದಲ್ಲಿ ವಿದ್ವಾಂಸರಾಗಿದ್ದ ಶ್ರೀಗಳು ಸಾವಿರಾರು ಜನರ ಬಾಳಿಗೆ ಬೆಳಕು ನೀಡಿದ್ದಾರೆ. ಆಧ್ಯಾತ್ಮ, ದಾಸೋಹ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಕೃಷಿ ಮೇಳ, ಪಶು ಮೇಳವನ್ನು ಆಯೋಜಿಸುವ ಮೂಲಕ ರೈತರ ಕಲ್ಯಾಣಕ್ಕೆ ಶ್ರಮಿಸಿದ್ದರು ಎಂದು ಹೇಳಿದರು.

ನನಗೆ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿತ್ತು ಎಂದು ಹೇಳಿ ಗುರುಗಳ ಗುರುವಂದನಾ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಭಾಗವಹಿಸಿದ್ದನ್ನು ಮೋದಿ ಉಲ್ಲೇಖಿಸಿದರು. ಅಷ್ಟೇ ಅಲ್ಲದೇ ಶ್ರೀಗಳ ಬಗ್ಗೆ ಕಲಾಂ ಬರೆದ ಕವಿತೆಯನ್ನು ಓದಿ ಮತ್ತೊಮ್ಮೆ ಶಿವಕುಮಾರ ಸ್ವಾಮೀಜಿ ಅವರಿಗೆ ಗೌರವವನ್ನು ಸಲ್ಲಿಸಿದರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳಿಗಾಗಿ ವಿಮಾನದಲ್ಲಿಯೇ ಕುಳಿತು ಕವನ ಬರೆದ ಅಬ್ದುಲ್ ಕಲಾಂ!

https://www.youtube.com/watch?v=FQVmZkPXCOo&feature=youtu.be

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *