ಆಸ್ತಿಗಾಗಿ ಭಾವನಿಂದ್ಲೇ ಕೊಲೆಯಾದ್ಳಾ ನಾದಿನಿ..?

– ಪತ್ನಿಯ ಶವ ಕಂಡು ದಂಗಾದ ಪತಿ

ಬೆಂಗಳೂರು: ಎರಡು ವರ್ಷ ಪ್ರೀತಿಸಿ ಮದುವೆಯಾಗಿ ಸುಖವಾಗಿ ಸಂಸಾರ ನಡೆಸುತ್ತಿದ್ದ ದಂಪತಿ ಮಧ್ಯೆ ವಿಲನ್ ಆಗಿ ಬಂದವನು ಪತ್ನಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.

ಅನುಶಾ ಕೊಲೆಯಾದ ಯುವತಿ. ಅನುಶಾ 1 ವರ್ಷದ ಹಿಂದೆ ಸನತ್‍ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಕೆಂಗೇರಿಯ ಸನ್ ಸಿಟಿ ಬಳಿ ಮನೆಯೊಂದರಲ್ಲಿ ದಂಪತಿ ವಾಸವಾಗಿದ್ದರು. ಆದರೆ ಶನಿವಾರ ಇದ್ದಕ್ಕಿದ್ದಂತೆ ಪತ್ನಿ ಅನುಶಾ ಮನೆಯಲ್ಲಿ ಶವವಾಗಿ ಬಿದ್ದಿದ್ದಾಳೆ. ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ಈ ಕೊಲೆಗೆ ಕಾರಣ ಎನ್ನಲಾಗ್ತಿದೆ.

ಬಿಹೆಚ್‍ಇಎಲ್ ನಲ್ಲಿ ಕೆಲಸ ಮಾಡುತ್ತಿದ್ದ ಅನುಶಾ ಶನಿವಾರ ಎಂದಿನಂತೆ ಕೆಲಸಕ್ಕೆ ತೆರಳಿದ್ದಳು. ಅದಾದ ಬಳಿಕ ಆಕೆ ಯಾರ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ. ಆಫೀಸ್‍ನಲ್ಲಿ ಕೆಲಸ ಇರಬಹುದು ಎಂದು ಸುಮ್ಮನಾಗಿದ್ದ ಫೋಷಕರು, ನಂತರ ಅನುಮಾನ ಬಂದು ಮತ್ತೆ ಮತ್ತೆ ಕರೆ ಮಾಡಿದಾಗ ಯಾವುದೇ ಪ್ರತ್ಯುತ್ತರ ಇರಲಿಲ್ಲ. ಹೀಗಾಗಿ ಪೋಷಕರು ಪತಿಗೆ ವಿಚಾರ ತಿಳಿಸಿದ್ದಾರೆ. ಕೂಡಲೇ ಸನತ್ ಮನೆಗೆ ಹೋಗಿ ಬೀಗ ಮುರಿದು ನೋಡಿದಾಗ ನೆಲದಲ್ಲಿ ಅನುಶಾ ಶವವಾಗಿ ಬಿದ್ದಿದ್ದಳು. ಇದರಿಂದ ಗಾಬರಿಗೊಂಡ ಸನತ್, ಅನುಶಾ ಪೋಷಕರಿಗೆ ವಿಷಯ ತಿಳಿಸಿದ್ದಾನೆ.

ಬಿಡದಿಯಲ್ಲಿ ಅನುಶಾ ಹೆಸರಿಗೆ ಸೇರಿದ ಆಸ್ತಿಯೊಂದಿತ್ತು. ಆ ವಿಚಾರಕ್ಕೆ ಅನುಶಾ ಅಕ್ಕ ಹಾಗೂ ಭಾವ ವಿವೇಕ್ ಪ್ರಕಾಶ್ ಆಗಾಗ ಜಗಳವಾಡುತ್ತಿದ್ದರು. ಆ ಹಿನ್ನೆಲೆ ಭಾವ ವಿವೇಕ್ ಅನುಶಾಳನ್ನು ಉಸಿರುಗಟ್ಟಿಸಿ ಕೊಂದಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈಗಾಗಲೇ ಆರೋಪಿ ವಿನೋದ್‍ನನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಳಿದವರ ಪತ್ತೆಗಾಗಿ ಬಲೆಬೀಸಿದ್ದಾರೆ. ಅನುಶಾ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಆರ್‍ಆರ್ ಆಸ್ಪತ್ರೆಗೆ ರವಾನಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *