ಬೆಂಕಿಪೊಟ್ಟಣದ ಲಾರಿಗೆ ಬೆಂಕಿ

ವಿಜಯಪುರ: ಆಕಸ್ಮಿಕ ಬೆಂಕಿ ತಗುಲಿ ಬೆಂಕಿ ಪೊಟ್ಟಣ ತುಂಬಿದ್ದ ಲಾರಿ ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲೇ ಧಗಧಗನೆ ಹೊತ್ತಿ ಉರಿದ ಘಟನೆ ವಿಜಯಪುರದಲ್ಲಿ ನಡೆದಿದೆ.

ತಾಲೂಕಿನ ಅರಕೇರಿ ತಾಂಡಾ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ತಮಿಳುನಾಡು ಮೂಲದ ಲಾರಿ ಇದಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದು, ಜೀವ ಭಯದಲ್ಲಿ ಪರಾರಿಯಾಗಿದ್ದಾರೆ. ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿ ಪೊಟ್ಟಣ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಆಗಸದೆತ್ತರಕ್ಕೆ ಚಿಮ್ಮಿದ ಬೆಂಕಿಯ ಕೆನ್ನಾಲಿಗೆ, ಎರಡೂ ಬದಿಯ ರಸ್ತೆಗಳು ಬ್ಲಾಕ್ ಆಗಿದ್ದು, ರಸ್ತೆ ಮೇಲೆಯೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ವಾಹನ ಸಂಚಾರಕ್ಕೆ ಅಡೆತಡೆಯಾಗಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬರೋಬ್ಬರಿ ಅರ್ಧಗಂಟೆ ಲಾರಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ ವಿಜಯಪುರ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಸಿ
ಬೆಂಕಿ ನಂದಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *