ಆಸ್ಟ್ರೇಲಿಯಾ ಪರ ಮತ್ತೆ ಕ್ರಿಕೆಟ್ ಆಡಲ್ಲ: ಕ್ಷಮೆಯಾಚಿಸಿ ಕಣ್ಣೀರಿಟ್ಟ ವಾರ್ನರ್

ಸಿಡ್ನಿ: ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿ ಒಂದು ವರ್ಷ ನಿಷೇಧಕ್ಕೆ ಒಳಗಾಗಿದ್ದ ಆಸೀಸ್ ಉಪನಾಯಕ ಡೇವಿಡ್ ವಾರ್ನರ್ ಕ್ಷಮೆಯಾಚಿಸಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ವಾರ್ನರ್ ಅವರ ಮೇಲೆ ಒಂದು ವರ್ಷ ನಿಷೇಧ ವಿಧಿಸಿದ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ವಾರ್ನರ್, ತಮ್ಮ ಕೃತ್ಯಕ್ಕೆ ಕ್ಷಮೆ ಕೋರಿದರು. ಅಲ್ಲದೇ ಮತ್ತೆ ಆಸ್ಟ್ರೇಲಿಯಾ ಪರ ಆಡುವುದಿಲ್ಲ ಎಂದು ಹೇಳಿದರು.

ಈ ವೇಳೆ ಕಣ್ಣೀರಿಟ್ಟ ಅವರು ಮತ್ತೆ ನಾನು ಆಸೀಸ್ ಪರ ಕ್ರಿಕೆಟ್ ಆಡಲು ಸಾಧ್ಯವಿಲ್ಲ. ಮುಂಬರುವ ದಿನಗಳಲ್ಲಿ ನನ್ನ ವೃತ್ತಿ ಜೀವನದಲ್ಲಿ ಈ ಘಟನೆ ಹೇಗೆ ನಡೆಯಿತು ಎಂಬುದನ್ನು ಅರಿತುಕೊಳ್ಳುತ್ತೇನೆ ಎಂದು ಹೇಳಿ ಆಸ್ಟ್ರೇಲಿಯಾ ಆಟಗಾರರು ಹಾಗೂ ಸಿಬ್ಬಂದಿಯ ಕ್ಷಮೆ ಕೋರಿದರು.

ವಿಶೇಷವಾಗಿ ಚೆಂಡು ವಿರೂಪಗೊಳಿಸಿದ ಪ್ರಕರಣಲ್ಲಿ ವಾರ್ನರ್ ಪ್ರಮುಖ ಸೂತ್ರಧಾರಿ ಎಂದು ತಿಳಿದು ಬಂದಿದ್ದು, ವಾರ್ನರ್ ಚೆಂಡು ವಿರೂಪಗೊಳಿಸುವ ಕುರಿತು ಸ್ಮಿತ್ ಹಾಗೂ ಬ್ಯಾನ್ ಕ್ರಿಫ್ಟ್ ರ ಮನವೊಲಿಸಿದ್ದರು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆಸೀಸ್ ನಾಯಕ ಸ್ಮಿತ್ ಕೂಡ ಗುರುವಾರ ಸುದ್ದಿಗೋಷ್ಠಿ ನಡೆಸಿ ಕ್ಷಮೆಯಾಚಿಸಿದ್ದರು. ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸ್ಮಿತ್ ಹಾಗೂ ವಾರ್ನರ್ ಗೆ ಒಂದು ವರ್ಷ ನಿಷೇಧ ವಿಧಿಸಿದ್ದು, ಬ್ಯಾನ್ ಕ್ರಾಫ್ಟ್ ಗೆ 9 ತಿಂಗಳು ನಿಷೇಧ ವಿಧಿಸಿದೆ.  ಇದನ್ನೂ ಓದಿ: 6 ಪದಗಳಿಂದಾಗಿ ಬಚಾವ್ ಆದ್ರು ಆಸೀಸ್ ಕೋಚ್ ಡ್ಯಾರೆನ್ ಲೆಹ್ಮನ್!

ಚೆಂಡು ವಿರೂಪಗೊಳಿಸದ ಪ್ರಕರಣದ ನಂತರ ಆಸೀಸ್ ಕ್ರಿಕೆಟ್ ಮಂಡಳಿ ಭಾರೀ ಮೊತ್ತದ ಪ್ರಯೋಜಕತ್ವವನ್ನು ಕಳೆದು ಕೊಂಡಿತ್ತು. ಅಲ್ಲದೇ ವಯಕ್ತಿಕವಾಗಿ ವಾರ್ನರ್, ಸ್ಮಿತ್ ಹಾಗೂ ಬ್ಯಾನ್ ಕ್ರಿಫ್ಟ್ ಅವರೊಂದಿಗೆ ಖಾಸಗಿ ಸಂಸ್ಥೆಗಳು ಮಾಡಿಕೊಂಡಿದ್ದ ಒಪ್ಪಂದಗಳನ್ನು ರದ್ದುಗೊಳಿಸಿದ್ದವು. ಇದರಿಂದ ಆಸೀಸ್ ಮಂಡಳಿ ಹಾಗೂ ಆಟಗಾರರು ದೊಡ್ಡ ಮೊತ್ತದ ಹಣವನ್ನು ಕಳೆದುಕೊಂಡಿದ್ದರು.  ಇದನ್ನೂ ಓದಿ: ನಾಯಕತ್ವದ ವಿಫಲತೆಯನ್ನು ಒಪ್ಪಿ, ಕ್ಷಮೆ ಕೇಳಿ ಕಣ್ಣೀರಿಟ್ಟ ಸ್ವೀವ್ ಸ್ಮಿತ್

Comments

Leave a Reply

Your email address will not be published. Required fields are marked *