ಎಕ್ಸಾಂಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿ

ರಾಯಚೂರು: ಪರೀಕ್ಷೆಯಲ್ಲಿ ಫೇಲಾಗಿದಕ್ಕೆ ಮನನೊಂದ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಲಕ್ಷ್ಮಣ ಲೇಔಟ್ ನಲ್ಲಿ ನಡೆದಿದೆ.

ಬೆಂಗಳೂರು ಮೂಲದ 22 ವರ್ಷದ ನವೀನ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ನವೀನ್ ನಗರದ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದನು. ಮೊದಲ ವರ್ಷದ ಪರೀಕ್ಷೆಯಲ್ಲಿ ನವೀನ್ ಫೇಲ್ ಆಗಿದ್ದನು.

ಫೇಲ್ ಆದ ಬಳಿಕ ಮಾನಸಿಕ ಖಿನ್ನತೆಗೊಳಾಗಿದ್ದ ನವೀನ್ ಮತ್ತೊಮ್ಮೆ ಪರೀಕ್ಷೆ ಬರೆಯಲು ಹೆದರಿದ್ದ. ಇಂದು ಬೆಳಗ್ಗೆ ನವೀನ್ ತಾಯಿ ಬೆಂಗಳೂರಿನಿಂದ ರಾಯಚೂರಿಗೆ ಬಂದಾಗಲೇ ಘಟನೆ ಬೆಳಕಿಗೆ ಬಂದಿದೆ. ನವೀನ್ ಸೋಮವಾರವೇ ಆತ್ಮಹತ್ಯೆಗೆ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ.

ಈ ಸಂಬಂಧ ನೇತಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments

Leave a Reply

Your email address will not be published. Required fields are marked *