ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲಗೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಯಾವುದೇ ಉತ್ತರ ನೀಡದೇ ಮೌನಕ್ಕೆ ಜಾರಿದ್ದಾರೆ.

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ. ಯಾರ ಅನುಮತಿ ಪಡೆದು ಪಾದಯಾತ್ರೆ ನಡೆಸುತ್ತಿದ್ದೀರಿ ಎಂದು ಕೋರ್ಟ್ ಪ್ರಶ್ನಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಹೈಕೋರ್ಟ್ ಪ್ರಶ್ನೆ ಕುರಿತು ಪಬ್ಲಿಕ್ ಟಿವಿಯ ವರದಿಗಾರರಿಗೆ, ಡಿ.ಕೆ.ಶಿವಕುಮಾರ್ ಮೌನದಲ್ಲೇ ಪ್ರತಿಕ್ರಿಯಿಸಿದ್ದಾರೆ. ಕೇವಲ ಕೈ ಸನ್ನೆಯನ್ನಷ್ಟೇ ಮಾಡಿದ್ದಾರೆ. ಕೈ ಮುಗಿದು ಮುಖದ ಮೇಲೆ ಕೈಯನ್ನು ಇಟ್ಟಿದ್ದಾರೆ.

ನಿಮಗೆ ಜ್ವರ ಬಂದಿದೆ, ಅದಕ್ಕೆ ಮೌನ ವಹಿಸಿದ್ದೀರಿ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ, ಏನು ಬೇಕಾದರೂ ಹೇಳಿಕೊಳ್ಳಲಿ ಎಂಬಂತೆ ಕೈ ಸನ್ನೆ ಮೂಲಕವೇ ಪ್ರತಿಕ್ರಿಯಿಸಿ ಮುಂದಕ್ಕೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಪಾದಯಾತ್ರೆ ಜೊತೆಗೆ ಮೌನಾಚರಣೆಯನ್ನೂ ಮಾಡುತ್ತಿದ್ದಾರೆ. ಇದನ್ನೂ ಓದಿ: ಪಾದಯಾತ್ರೆಗೆ ಹೊರಟಿಲ್ಲ, ಅರೆಸ್ಟ್ ಮಾಡ್ಲಿ ಅಂತ ಕಾಯುತ್ತಿದ್ದಾರೆ: ನಾರಾಯಣ ಗೌಡ

ಮೇಕೆದಾಟು ಪಾದಯಾತ್ರೆಗೆ ಜ.9ರಂದು ಚಾಲನೆ ಸಿಕ್ಕಿದೆ. ಪಾದಯಾತ್ರೆ ಮೂರು ದಿನ ಪೂರೈಸಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

Comments

Leave a Reply

Your email address will not be published. Required fields are marked *