ಹೆಚ್‍ಡಿಕೆ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡ್ಕೊಂಡಿದ್ರು ಎಂದು ಗೊತ್ತಿದೆ: ಬೊಮ್ಮಾಯಿ

ಕಾರವಾರ: ಕುಮಾರಸ್ವಾಮಿ ಅವರು ತಮ್ಮ ಕಾಲದಲ್ಲಿ ಪೊಲೀಸರನ್ನು ಯಾವುದಕ್ಕೆ ಬಳಕೆ ಮಾಡಿಕೊಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ. ಆದರೆ ನಮ್ಮ ಕಾಲದಲ್ಲಿ ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಂಡಿದ್ದಾರೆ. ಆದ ಕಾರಣ ಕುಮಾರಸ್ವಾಮಿ ಅವರು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂಗೆ ತಿರುಗೇಟು ನೀಡಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಟಿಎಂಎಸ್ ಅಮೃತ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉಗ್ರವಾದಿಗಳ ನೆಲೆಗಳ ಮೇಲೆ ಹಾಗೂ ಅವರ ಚಟುವಟಿಕೆಗಳ ಮೇಲೆ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದ್ದು, ಕರ್ನಾಟಕದಲ್ಲಿ ಉಗ್ರರ ಯಾವುದೇ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ. ತಮಿಳುನಾಡಿನಿಂದ ಉಗ್ರರ ಕುರಿತ ಮಾಹಿತಿ ಬಂದ ತಕ್ಷಣ ಮೂವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಅವರೂ ಸೇರಿದಂತೆ ಅವರ ಎಲ್ಲಾ ಜಾಲಗಳನ್ನು ಬೇಧಿಸುವ ಕಾರ್ಯ ಆಗುತ್ತಿದೆ ಎಂದರು.

ಉಗ್ರರು ನಿರಂತರವಾಗಿ ಒಂದು ಕಡೆ ಇರುವುದಿಲ್ಲ. ತಾಣಗಳನ್ನು ಬದಲಿಸುತ್ತಿರುತ್ತಾರೆ. ಉಗ್ರರ ಹಿಡಿಯಲು ಶೋಧನೆ ಮಾಡಲಾಗುತ್ತಿದೆ. ಅಲ್ಲದೇ ಭಯೋತ್ಪಾದನೆ ಮಾಡುವ ಎಲ್ಲಾ ಶಕ್ತಿಗಳನ್ನು ನಿಯಂತ್ರಿಸುವ ನಮ್ಮ ಪೊಲೀಸರು ನಿಯಂತ್ರಿಸುತ್ತಾರೆ ಎಂದರು.

Comments

Leave a Reply

Your email address will not be published. Required fields are marked *