ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿದ ಸಚಿವ ಹೆಚ್.ಡಿ.ರೇವಣ್ಣ

ಹಾಸನ: ಸಚಿವ ಹೆಚ್.ಡಿ.ರೇವಣ್ಣ ಇಂದು ವಾಸ್ತು ಪ್ರಕಾರವೇ ಶಿರಾಡಿ ಘಾಟ್ ಉದ್ಘಾಟಿಸಿದ್ದಾರೆ.

ಅಧಿಕಾರಿಗಳು ಶಿರಾಡಿ ಘಾಟ್ ಉದ್ಘಾಟನೆಯನ್ನು ಪಶ್ಚಿಮಾಭಿಮುಖವಾಗಿ ಸಿದ್ಧಪಡಿಸಿದ್ದರು. ಸ್ಥಳಕ್ಕಾಗಮಿಸಿದ ಸಚಿವರು ಶುಭಕಾರ್ಯಗಳನ್ನು ಪೂರ್ವಾಭಿಮುಖವಾಗಿ ಮಾಡಬೇಕು ಎಂದು ಟೇಪ್ ಕೆಳಗೆ ನುಸುಳಿ ಎಲ್ಲರಿಗೂ ಪೂರ್ವಾಭಿಮುಖವಾಗಿ ನಿಲ್ಲುವಂತೆ ಸೂಚಿಸಿದರು.

ಸಚಿವರು ದಿಕ್ಕು ಬದಲಿಸಿದ್ದರಿಂದ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಯಿತು. ದಿಕ್ಕು ಬದಲಿಸಿ ಪೂರ್ವಾಭಿಮುಖವಾಗಿ ನಿಂತ ಸಚಿವರು ಟೇಪ್ ಕತ್ತರಿಸಿ ಶಿರಾಡಿ ಘಾಟ್ ಸಂಚಾರವನ್ನು ಮುಕ್ತಗೊಳಿಸಿದರು. ತಡೆಗೋಡೆ, ಸೂಚನಾ ಫಲಕ, ಸಣ್ಣ-ಪುಟ್ಟ ಕಾಮಗಾರಿಗಳು ಪ್ರಗತಿ ಬಾಕಿ ಹಿನ್ನೆಲೆಯಲ್ಲಿ ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರ ಮುಕ್ತಗೊಳಿಸಲಾಗಿದೆ.

ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಿರುವ ಒಟ್ಟು 26 ಕಿ.ಮೀ ಉದ್ದದ ಶಿರಾಡಿಘಾಟ್ ಕಾಂಕ್ರೀಟ್ ರಸ್ತೆ ಸುಮಾರು 30 ವರ್ಷ ಬಾಳಿಕೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಜನವರಿ 20 ರಿಂದ ಆರಂಭವಾಗಿದ್ದ 74 ಕೋಟಿ ರೂ. ವೆಚ್ಚ, 12.38 ಕಿಮೀ ಉದ್ದದ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದ್ದು ಇಂದು ಸಂಚಾರ ಮುಕ್ತವಾಗಿದೆ.

Comments

Leave a Reply

Your email address will not be published. Required fields are marked *