ಸಿದ್ದರಾಮಯ್ಯ ಕುಡುಕ, ರಕ್ತದ ಕಣಕಣದಲ್ಲಿಯೂ ಮೋಸ ಇದೆ: ಈಶ್ವರಪ್ಪ

– ನಳಿನ್ ಕುಮಾರ್ ಕಟೀಲ್ ಒಬ್ಬ ದೇಶಭಕ್ತ

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಕುಡುಕ. ಅಲ್ಲದೆ ಅವರ ರಕ್ತದ ಕಣ ಕಣ್ದಲ್ಲಿಯೂ ಮೋಸ ಇದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಕಟೀಲ್ ಒಬ್ಬ ಭಯೋತ್ಪಾದಕ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಈಶ್ವರಪ್ಪ, ಸಿದ್ದರಾಮಯ್ಯ ಯಾವಾಗ ಕುಡೀತಾರೋ ಯಾವಾಗ ಕುಡಿಯಲ್ಲೊ ಗೊತ್ತಿಲ್ಲ. ಅವರು ಹೆಂಡ ಕುಡಿದಾಗ ಒಂದು ಮಾತಾಡ್ತಾರೆ. ಹೆಂಡ ಕುಡಿಯದೇ ಇದ್ದಾಗ ಒಂದು ಮಾತಾಡ್ತಾರೆ ಎಂದರು.

ಸಿದ್ದರಾಮಯ್ಯ ಒಬ್ಬ ಮಹಾನ್ ಮೋಸಗಾರ. ಸಿದ್ದರಾಮಯ್ಯ ಅವರ ರಕ್ತದ ಕಣಕಣದಲ್ಲಿ ಮೋಸ ಇದೆ. ಮೊದಲು ಜೆಡಿಎಸ್ ಗೆ ಮೋಸ ಮಾಡಿದ್ದಾರೆ. ಶ್ರೀನಿವಾಸ್ ಪ್ರಸಾದ್‍ಗೆ ಮೋಸ ಮಾಡಿದ್ದಾರೆ. ಈಗ ಕಾಂಗ್ರೆಸ್ ಗೂ ಮೋಸ ಮಾಡಲು ರೆಡಿ ಆಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಧರ್ಮಜೋಡನೆ ಮಾಡಿದ್ದೆ ಪರಿಷತ್ ಟಿಕೆಟ್ ಪಡೆಯಲು ಮುಳುವಾಯಿತಾ: ಎಸ್.ಆರ್. ಪಾಟೀಲ್

ನಳಿನ್ ಕುಮಾರ್ ಕಟೀಲ್ ಒಬ್ಬ ದೇಶಭಕ್ತ. ಸಿದ್ದರಾಮಯ್ಯ ಒಬ್ಬ ಮೋಸಗಾರ. ಇಂತಹ ಮೋಸಗಾರ ನಮ್ಮ ಅಧ್ಯಕ್ಷರ ಬ್ಗಗೆ ಏನು ಮಾತಾಡ್ತಾರೆ?. ಜಮೀರ್ ಅಹ್ಮದ್ ಅವರನ್ನು ಸಿದ್ದರಾಮಯ್ಯ ಹೊಗಳುತ್ತಾರೆ. ಕಟೀಲ್ ರಂತಹ ದೇಶ ಭಕ್ತರನ್ನ ಭಯೋತ್ಪಾದಕ ಅಂತಾರೆ ಎಂದು ಕಿಡಿಕಾರಿದರು.

ಇದೇ ವೇಳೆ ಹೊಸ ವೈರಸ್ ಓಮಿಕ್ರಾನ್ ಬಗ್ಗೆ ಮಾತನಾಡಿ, ಕೊರೊನಾ ರೂಪಾಂತರಿ ಆತಂಕ, ಭೀತಿ ಇದೆ. ವಿಶ್ವದ 17 ದೇಶಗಳಲ್ಲಿ ರೂಪಾಂತರಿ ಓಮಿಕ್ರಾನ್ ಸೋಂಕು ಬಂದಿದೆ. ನಮ್ಮ ದೇಶದಲ್ಲೂ ಬರಬಹುದು ಅನ್ನೋ ಆತಂಕ ಇದೆ. ಸರ್ಕಾರ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕೊ ಕೈಗೊಳ್ಳುತ್ತಿದೆ. ಈಗಾಗಲೇ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಜನರು ಕೂಡ ಎಚ್ಚೆರದಿಂದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಲಾಕ್ ಡೌನ್ ಮಾಡುವ ಸಾದ್ಯತೆ ಕಡಿಮೆ ಇದೆ. ಜನರು ಎಚ್ಚರದಿಂದ ಇರಬೇಕು ಎಂದು ಈಶ್ವರಪ್ಪ ಹೇಳಿದರು.

 

Comments

Leave a Reply

Your email address will not be published. Required fields are marked *