ಸಚಿವ ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಅವಘಡ

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಸೋಮವಾರ ರಾತ್ರಿ ಸರ್ಕಾರಿ ಬಂಗಲೆಯ ಬೆಡ್ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈಶ್ವರಪ್ಪ ಮತ್ತು ಅವರ ಪತ್ನಿ ಜಯಲಕ್ಷ್ಮಿ ಅವಘಡದಿಂದ ಪಾರಾಗಿದ್ದಾರೆ. ರಾತ್ರಿ ಬೆಡ್ ರೂಂನಲ್ಲಿಯ ಎಸಿ ಆನ್ ಮಾಡುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈಶ್ವರಪ್ಪನವರ ಅಳಿಯ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಆಗಮಿಸುಷ್ಟರಲ್ಲಿಯೇ ಕೋಣೆಯಲ್ಲಿದ್ದ ಟವಿ ಕಬೋರ್ಡ್ ಮತ್ತು ಕೆಲ ದಾಖಲೆಗಳು ಸುಟ್ಟು ಹೋಗಿವೆ. ಸರ್ಕಾರಿ ಬಂಗಲೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಶ್ವರಪ್ಪ ದಂಪತಿ ಪಕ್ಕದಲ್ಲಿಯೇ ಇದ್ದ ಸ್ವಂತ ಮನೆಗೆ ತೆರಳಿದ್ದಾರೆ.

Comments

Leave a Reply

Your email address will not be published. Required fields are marked *