ಪ್ರಜ್ವಲ್ ರೇವಣ್ಣ ಸ್ಪರ್ಧೆ: ಪರೋಕ್ಷವಾಗಿ ಗುಟ್ಟು ಬಿಚ್ಚಿಟ್ಟ ಸಚಿವ ಪುಟ್ಟರಾಜು

ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಕಣಕ್ಕೆ ಇಳಿಯುತ್ತಾರಾ ಇಲ್ಲವೋ ಎನ್ನುವುದರ ಬಗ್ಗೆ ಚರ್ಚೆ ಆರಂಭವಾಗಿದ್ದು, ಈಗ ಮಂಡ್ಯದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಬಗ್ಗೆ ಉಸ್ತುವಾರಿ ಸಚಿವ ಪುಟ್ಟರಾಜು ಸುಳಿವು ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಇಲ್ಲವಾದರೆ ಮತ್ತೆ ನಾನೇ ಮಂಡ್ಯ ಲೋಕಸಭೆಗೆ ಸ್ಫರ್ಧಿಸಬಹುದು ಅಥವಾ ಪ್ರಜ್ವಲ್ ರೇವಣ್ಣ ನಿಲ್ಲುತ್ತಾರೋ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ ಎಂದರು.

ದೇವೇಗೌಡರು ಮತ್ತು ಪ್ರಜ್ವಲ್ ರೇವಣ್ಣ ಇಬ್ಬರ ಹೆಸರನ್ನು ಹೇಳುವ ಮೂಲಕ ಪರೋಕ್ಷವಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಬಗ್ಗೆ ಪುಟ್ಟರಾಜು ಗುಟ್ಟು ಬಿಚ್ಚಿಟ್ಟರು. ಅಂಬರೀಷ್ ನಿಲ್ಲತ್ತಾರೆ ಅಂದರೂ ಅವಕಾಶ ನೀಡುತ್ತೇವೆ. ಬಹಳ ಜನ ಅಭ್ಯರ್ಥಿಗಳು ಪಕ್ಷದಲ್ಲಿದ್ದಾರೆ ಅಂತಿಮವಾಗಿ ಯಾರು ಅಭ್ಯರ್ಥಿ ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಎಂದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Comments

Leave a Reply

Your email address will not be published. Required fields are marked *